04/09/2026
ಶ್ರೀ ಕೃಷ್ಣ ಜನ್ಮಾಷ್ಟಮಿಯ ಪವಿತ್ರ ಸಂದರ್ಭದಲ್ಲಿ ಚಿತ್ರದುರ್ಗದ ಶ್ರೀ ಮಾದರ ಚೆನ್ನಯ್ಯ ಮಹಾ ಸಂಸ್ಥಾನ ಮಠಕ್ಕೆ ಭೇಟಿ ನೀಡಿ, ಪರಮಪೂಜ್ಯ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿಗಳ ಆಶೀರ್ವಾದ ಪಡೆಯುವ ಪುಣ್ಯಾವಕಾಶ ದೊರೆಯಿತು.
ಇದೇ ಸಂದರ್ಭದಲ್ಲಿ ಪರಮಪೂಜ್ಯರಿಂದ ಆಶೀರ್ವಾದಪೂರ್ವಕವಾಗಿ ಕೃಷ್ಣ ಜನ್ಮಾಷ್ಟಮಿ ಈ ಶುಭದಿನದಂದೇ ವಿಶೇಷ ಶ್ರೀ ಕೃಷ್ಣನ ಮೂರ್ತಿಯನ್ನು ಸ್ವೀಕರಿಸಿದ್ದು ನನ್ನ ಸೌಭಾಗ್ಯ. ಶ್ರೀ ಕೃಷ್ಣನ ಕೃಪೆ ನಾಡಿನ ಸಮಸ್ತ ಜನರ ಮೇಲಿರಲಿ, ಎಲ್ಲರ ಬದುಕಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ.