04/09/2026
ಮಡಿಕೇರಿಯಲ್ಲಿ ಪ್ರಜಾಸೇವೆ ಆಂದೋಲನ*"
*ಜನರ ಬಳಿಗೆ ಸರ್ಕಾರ – ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ*
*ನಿಮ್ಮ ಸಮಸ್ಯೆ – ಸರ್ಕಾರದ ಗಮನಕ್ಕೆ*
*ನಿಮ್ಮ ಅಹವಾಲು – ಪರಿಹಾರದ ಹಾದಿಗೆ*
*ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ “ಪ್ರಜಾಸೇವೆ – ಜನಾಂದೋಲನ ಸೇವೆ”* ಕಾರ್ಯಕ್ರಮದ ಅಂಗವಾಗಿ, ಇದೇ ಬರುವ ಶನಿವಾರ, ಸೆಪ್ಟೆಂಬರ್ 5ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜನಾಂದೋಲನ ಸಭೆಯನ್ನು ಆಯೋಜಿಸಲಾಗಿದೆ.ಸರ್ಕಾರದ ಸೇವೆಗಳು ಹಾಗೂ ಸೌಲಭ್ಯಗಳು ಜನರ ಮನೆಬಾಗಿಲಿಗೆ ತಲುಪಬೇಕು ಎಂಬ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ಶನಿವಾರ ಹೋಬಳಿ ಹಾಗೂ ತಾಲೂಕು ಕೇಂದ್ರಗಳಲ್ಲಿ ಸಭೆಗಳನ್ನು ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಆಲಿಸಿ, ಸಂಬಂಧಪಟ್ಟ ಅಧಿಕಾರಿಗಳ ಸಮ್ಮುಖದಲ್ಲಿ ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದು ಈ ಜನಾಂದೋಲನದ ಪ್ರಮುಖ ಉದ್ದೇಶವಾಗಿದೆ.ಮಾನ್ಯ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ *ಸನ್ಮಾನ್ಯ ಶ್ರೀ ಪಿ.ಎಂ. ನರೇಂದ್ರಸ್ವಾಮಿ* ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಕೊಡಗು ಜಿಲ್ಲೆ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ.
ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿ, ಈ ಜನಪರ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಈ ಮೂಲಕ ಆತ್ಮೀಯವಾಗಿ ಕೋರಲಾಗಿದೆ.
*ಸಿ ಎಸ್ ಅರುಣ್ ಮಾಚಯ್ಯ*
ಉಪಾಧ್ಯಕ್ಷರು (ರಾಜ್ಯ ಸಚಿವ ದರ್ಜೆ )
ಕರ್ನಾಟಕ ಕ್ರೀಡಾ ಪ್ರಾಧಿಕಾರ.
ಕರ್ನಾಟಕ ಸರ್ಕಾರ. ಹಾಗೂ ಮಾಜಿ ಶಾಸಕರು ವಿಧಾನ ಪರಿಷತ್ ಕೊಡಗು ಜಿಲ್ಲೆ.
.
.