04/09/2026
ದಿನಾಂಕ: 03-09-2026 ರಂದು ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿ ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮವನ್ನು ಬೆಂಗಳೂರು ನಗರ ಜಿಲ್ಲೆಯ ಶ್ರೀಮತಿ ಕೆ. ಶಾಂತಕುಮಾರಿ ಇವರ ಮನೆಯಲ್ಲಿ ಆಯೋಜನೆ ಮಾಡಲಾಗಿತ್ತು. ಕನ್ನಡ ಪುಸ್ತಕ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಮಾನಸ ಇವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಶ್ರೀಮತಿ ನೀಲಾ ಪಾಟೀಲ್ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವು ನಡೆಯಿತು. ಸಂಚಾಲಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.