27/05/2026
ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ.
ವಿದ್ಯುತ್ ಬಿಲ್ ಹೊರೆಯಿಂದ ಕಂಗೆಟ್ಟಿದ್ದ ಜನರಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಿ, ನೆಮ್ಮದಿಯ ಬದುಕು ಕಲ್ಪಿಸುವ ಬದ್ಧತೆಯೊಂದಿಗೆ ನಾವು ಜಾರಿಗೆ ತಂದ ಗೃಹಜ್ಯೋತಿ ಯೋಜನೆ ಇಂದು ನಾಡಿನ ಪ್ರತಿ ಮನೆಯನ್ನು ಬೆಳಗುತ್ತಿದೆ.
ಈ ಯೋಜನೆಯಡಿ ರಾಜ್ಯದ ಒಟ್ಟು 1.64 ಕೋಟಿ ಕುಟುಂಬಗಳಿಗೆ ಮಾಸಿಕ ಗರಿಷ್ಠ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈವರೆಗೆ ಯೋಜನೆಗಾಗಿ ₹26,115 ಕೋಟಿ ಅನುದಾನವನ್ನು ವ್ಯಯಿಸಲಾಗಿದೆ.