Taluk Panchayat Kamalnagar

Taluk Panchayat Kamalnagar Contact information, map and directions, contact form, opening hours, services, ratings, photos, videos and announcements from Taluk Panchayat Kamalnagar, Public & Government Service, Bidar.

ಕಮಲನಗರ ತಾಲೂಕಿನ ದಾಬಕಾ (ಸಿ) ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅತಿ ಕಡಿಮೆ ಮತದಾನವಾದ ಹಿನ್ನೆಲೆಯಲ್ಲಿ ಗುರುವ...
19/04/2024

ಕಮಲನಗರ ತಾಲೂಕಿನ ದಾಬಕಾ (ಸಿ) ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅತಿ ಕಡಿಮೆ ಮತದಾನವಾದ ಹಿನ್ನೆಲೆಯಲ್ಲಿ ಗುರುವಾರ ರಂಗೋಲಿ ಮತ್ತು ಮಾನವ ಸರಪಳಿ ಮೂಲಕ ಮತದಾನ ಜಾಗೃತಿ ಅಭಿಯಾನ ಮಾಡಲಾಯಿತು. ಅಭಿಯಾನದ ಉದ್ದೇಶ ಮತ್ತು ಮಹತ್ವದ ಬಗ್ಗೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾನ್ಯ ಶಿವಕುಮಾರ ಘಾಟೆ ಸರ್ ರವರು ತಿಳಿಸಿ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಗಪ್ಪ, ಡಿಇಓ, ಸದಸ್ಯರು, ಬಿಎಲ್ಓ, ಐಇಸಿ ಸಂಯೋಜಕರಾದ ಸವಿತಾ ನಾಗೇಶ ಸೇರಿದಂತೆ ಇತರರು ಇದ್ದರು.

ಕಮಲನಗರ ತಾಲೂಕಿನ ಚಿಮೇಗಾಂವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅತಿ ಕಡಿಮೆ ಮತದಾನವಾದ ಹಿನ್ನೆಲೆಯಲ್ಲಿ ಗುರುವಾರ...
18/04/2024

ಕಮಲನಗರ ತಾಲೂಕಿನ ಚಿಮೇಗಾಂವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅತಿ ಕಡಿಮೆ ಮತದಾನವಾದ ಹಿನ್ನೆಲೆಯಲ್ಲಿ ಗುರುವಾರ ರಂಗೋಲಿ, ಕೈಯಲ್ಲಿ ಮದರಂಗಿ ಜೊತೆಗೆ ಕಾಲ್ನಡಿಗೆ ಮೂಲಕ ಮತದಾನ ಜಾಗೃತಿ ಅಭಿಯಾನ ಮಾಡಲಾಯಿತು. ಅಭಿಯಾನದ ಉದ್ದೇಶ ಮತ್ತು ಮಹತ್ವದ ಬಗ್ಗೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾನ್ಯ ಶಿವಕುಮಾರ ಘಾಟೆ ಸರ್ ರವರು ತಿಳಿಸಿದರು.

ನಿಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಿ
18 ವರ್ಷ ಪೂರ್ಣಗೊಳಿಸಿದ ಪ್ರತಿಯೊಬ್ಬ ಗಂಡು ಮತ್ತು ಹೆಣ್ಣು ನಾಗರಿಕರು ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತವನ್ನು ಹಾಕಬೇಕು ಎಂದು ತಿಳಿಸಿದರು.

ಕಮಲನಗರ ತಾಲೂಕಿನ ಚಿಕ್ಲಿ (ಯು) ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಚೊಂಡಿ ಮುಖೇಡ ಗ್ರಾಮದಲ್ಲಿ ಸಹಾಯಕ ಚುನಾವಣಾಧಿಕಾರಿ, ತಹಶೀಲ್ದಾರ ಮತ್ತು ತಾ...
15/04/2024

ಕಮಲನಗರ ತಾಲೂಕಿನ ಚಿಕ್ಲಿ (ಯು) ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಚೊಂಡಿ ಮುಖೇಡ ಗ್ರಾಮದಲ್ಲಿ ಸಹಾಯಕ ಚುನಾವಣಾಧಿಕಾರಿ, ತಹಶೀಲ್ದಾರ ಮತ್ತು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿರವರ ಸಮ್ಮುಖದಲ್ಲಿ ಮತದಾನ ಜಾಗೃತಿ ಅಭಿಯಾನ ನಡೆಸಲಾಯಿತು.

ಇಂದು ಕಮಲನಗರ ತಾಲೂಕಿನ ಕೊರೆಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬೆಡಕುಂದಾ ಗ್ರಾಮದಲ್ಲಿ ದುಡಿಯೋಣ ಬಾ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು....
23/03/2022

ಇಂದು ಕಮಲನಗರ ತಾಲೂಕಿನ ಕೊರೆಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬೆಡಕುಂದಾ ಗ್ರಾಮದಲ್ಲಿ ದುಡಿಯೋಣ ಬಾ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಧನರಾಜ ಭಾವಗೆ, ಟಿಎ ಶಿವಾನಂದ ಬಿರಾದರ, ಡಿಇಒ ವಿವೇಕಾನಂದ, ಐಇಸಿ ಸಂಯೋಜಕರು ಹಾಗೂ ಇತರರು ಇದ್ದರು.

ಮಾನ್ಯರೇ,ಇಂದು ಕಮಲನಗರ ತಾಲೂಕಿನ ಕಮಲನಗರ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ದುಡಿಯೋಣ ಬಾ ಅಭಿಯಾನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ...
22/03/2022

ಮಾನ್ಯರೇ,
ಇಂದು ಕಮಲನಗರ ತಾಲೂಕಿನ ಕಮಲನಗರ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ದುಡಿಯೋಣ ಬಾ ಅಭಿಯಾನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಜೊತೆಗೆ ಸಸಿಗೆ ನೀರೆರೆಯುವುದರ ಮೂಲಕ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಚಾಲನೆ ನೀಡಿದರು.

ಗ್ರಾಮೀಣ ಭಾಗದ ಜನರು ಗುಳೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಎಪ್ರಿಲ್, ಮೇ ಮತ್ತು ಜೂನ ಈ ಮೂರು‌ ತಿಂಗಳು ಗ್ರಾಮೀಣ ಭಾಗದ ಜನರಿಗೆ ಕೃಷಿ ಚಟುವಟಿಕೆ ಮಾಡಲು ಕೂಲಿ ಕೆಲಸ ಲಭ್ಯವಿರುವುದಿಲ್ಲ. ಆದ್ದರಿಂದ ಗ್ರಾಮದ ಜನರು ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಉದ್ಯೋಗ ಚೀಟಿ ( ಜಾಬ್ ಕಾರ್ಡ) ಮಾಡಿಕೊಂಡು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ನರೇಗಾ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾ ಪಂ ಕಾರ್ಯನಿರ್ವಾಹಕ ಅಧಿಕಾರಿ ಫಜಲ್ ಸೈಯದ, ಗ್ರಾಮ ಪಂಚಾಯತಿ ಪಿಡಿಒ ರಾಜಕುಮಾರ ತಂಬಾಕೆ , ಗ್ರಾಮ ಪಂಚಾಯತಿ ಅಧ್ಯಕ್ಷರು ಶಿವರಾಜ ಜುಲಪೆ ಮತ್ತು ಉಪಾಧ್ಯಕ್ಷರು ಬಾಲಾಜಿ, ಟಿಸಿ ಆನಂದ ಕಾಳಗಾಪುರ, ಐಇಸಿ ಸಂಯೋಜಕಿ ಸವಿತಾ ನಾಗೇಶ, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಇತರರು ಇದ್ದರು.

ಇಂದು ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಳತ (ಕೆ) ಗ್ರಾಮದಲ್ಲಿ ನಡೆಯುತ್ತಿರುವ  ಸಿಸಿಟಿ ಕಾಮಗಾರಿ ಸ್ಥಳಕ್ಕೆ ಭ...
10/03/2022

ಇಂದು ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಳತ (ಕೆ) ಗ್ರಾಮದಲ್ಲಿ ನಡೆಯುತ್ತಿರುವ ಸಿಸಿಟಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ವೀಕ್ಷಿಸಿ ರೋಜಗಾರ ದಿವಸ ಆಚರಿಸಿಲಾಯಿತು. ಮನರೇಗಾ ಯೋಜನೆಯಲ್ಲಿ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಂಡು ಗ್ರಾಮೀಣ ಭಾಗದ ಜನರು ಆರ್ಥಿಕವಾಗಿ ಸದೃಢರಾಗಬೇಕೆಂದು ತಿಳಿಸಲಾಯಿತು. ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳ 18 ರಿಂದ 50 ವಯೋಮಿತಿ ಹೊಂದಿರುವವರು ವಾರ್ಷಿಕ ರೂ. 330 ವಿಮಾ ಕಂತು ಪಾವತಿಸಿ 2 ಲಕ್ಷ ರೂ. ಜೀವ ವಿಮಾ ಪಡೆಯುವ ಸೌಲಭ್ಯ ಪಡೆಯಬಹುದಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ 18 ರಿಂದ 70 ವಯೋಮಿತಿಯ ಫಲಾನುಭವಿಗಳು ರೂ. 12 ವಿಮಾ ಕಂತು ಪಾವತಿಸಿ ಅಪಘಾತಗಳ ಸಂದರ್ಭದಲ್ಲಿ ರೂ. 2 ಲಕ್ಷ ವಿಮೆ ಪರಿಹಾರ ಸೌಲಭ್ಯ ಪಡೆಯಲು ಅನುಕೂಲವಿದೆ. ಇನ್ನು ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಡಿ ಪ್ರಧಾನ ಮಂತ್ರಿ ಆರೋಗ್ಯ ಯೋಜನೆ ಗುರುತಿಸಲ್ಪಟ್ಟ ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಅರ್ಹ ಕುಟುಂಬಗಳಿಗೆ ವಾರ್ಷಿಕ ರೂ. 5 ಲಕ್ಷದವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ನೀಡುವ ಸೌಲಭ್ಯ ಪಡೆಯಬಹುದಾಗಿದೆ. ಅರ್ಹರು ನೋಂದಣಿ ಮಾಡಿಸಲು ಬೇಕಾಗುವ ಅಗತ್ಯ ದಾಖಲೆ ತೆಗೆದುಕೊಂಡು ಪಂಚಾಯತಿಗೆ ಭೇಟಿ ನೀಡುವಂತೆ ಮಾಹಿತಿಯನ್ನು ನೀಡಲಾಯಿತು.

ಇಂದು ಕಮಲನಗರ ತಾಲೂಕಿನ ಬೆಳಕುಣಿ (ಬಿಎಚ್)ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇರುವ ಸಂಗನಾಳ ಗ್ರಾಮದಲ್ಲಿ  ನರೇಗಾ ಯೋಜನೆಯಡಿ ನಡೆಯುತ್ತಿರುವ ನಾಲಾ ...
07/03/2022

ಇಂದು ಕಮಲನಗರ ತಾಲೂಕಿನ ಬೆಳಕುಣಿ (ಬಿಎಚ್)ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇರುವ ಸಂಗನಾಳ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ನಾಲಾ ಟರ್ನಿಂಗ್ ಮತ್ತು ಪಿಚ್ಚಿಂಗ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ರೋಜಗಾರ್ ದಿವಸ್ ಆಚರಣೆ ಮಾಡಲಾಯಿತು. ಈ ವೇಳೆ ತಾಲೂಕು ಪಂಚಾಯತ್ ತಾಂತ್ರಿಕ ಸಹಾಯಕರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಐ.ಇ.ಸಿ ಸಂಯೋಜಕರು ಇದ್ದರು.

ತಾಲೂಕಿನ. ಮದನೂರ ಗ್ರಾಮ ಪಂಚಾಯತಿಯ ಮನೆ ಮನೆಗೆ ತೆರಳಿ ವಿಮೆ ನೋಂದಣಿ, ಪೋಸ್ಟರ್ ವಿತರಣೆ, ರೋಜಗಾರ ದಿವಸ ಆಚರಣೆ ಮಾಡಲಾಯಿತು.
27/02/2022

ತಾಲೂಕಿನ. ಮದನೂರ ಗ್ರಾಮ ಪಂಚಾಯತಿಯ ಮನೆ ಮನೆಗೆ ತೆರಳಿ ವಿಮೆ ನೋಂದಣಿ, ಪೋಸ್ಟರ್ ವಿತರಣೆ, ರೋಜಗಾರ ದಿವಸ ಆಚರಣೆ ಮಾಡಲಾಯಿತು.

ತಾಲೂಕಿನ ಬೆಳಕುಣಿ (ಬಿಎಚ್) ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸಂಗನಾಳ ಗ್ರಾಮದಲ್ಲಿ ಆರೋಗ್ಯ ಶಿಬಿರ ಮತ್ತು ಇ - ಶ್ರಮ ಕಾರ್ಡ್ ನೋಂದಣಿ  ಕಾ...
27/02/2022

ತಾಲೂಕಿನ ಬೆಳಕುಣಿ (ಬಿಎಚ್) ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸಂಗನಾಳ ಗ್ರಾಮದಲ್ಲಿ ಆರೋಗ್ಯ ಶಿಬಿರ ಮತ್ತು ಇ - ಶ್ರಮ ಕಾರ್ಡ್ ನೋಂದಣಿ ಕಾರ್ಯಕ್ರಮ ನಡೆಸಲಾಯಿತು.

27/02/2022
27/02/2022

ಮಾನ್ಯರೇ, ಇಂದು ಕಮಲನಗರ ತಾಲೂಕಿನ ಬೆಳಕೋಣಿ (ಬಿಎಚ್) ಗ್ರಾಮ ಪಂಚಾಯತಿಗೆ ಭೇಟಿ ನೀಡಲಾಯಿತು. ಹಾಗೂ ದೇವಿದಾಸ ಎಂಬುವವರ ಹೊಲದಲ್ಲಿ ನಡೆಯುತ್ತಿರುವ ಬೋಲ್ಡರ್ ಬಂಡ್ ಕಾಮಗಾರಿಯ ಸ್ಥಳದಲ್ಲಿ ರೋಜಗಾರ ದಿವಸ ಆಚರಣೆ ಮಾಡಲಾಯಿತು. ಕಾರ್ಯನಿರ್ವಾಹಕ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ವೀಕ್ಷಿಸಿದರು. ಜೊತೆಗೆ ಕೂಲಿಕಾರ್ಮಿಕರಿಗೆ ವಿಮಾ ಯೋಜನೆಗಳಾದ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಆರೋಗ್ಯ ಭೀಮಾ ಯೋಜನೆಗಳ ಮಹತ್ವದ ಬಗ್ಗೆ ಮಾಹಿತಿ ನೀಡಲಾಯಿತು. ಇದೆ ಸಂದರ್ಭದಲ್ಲಿ ಸುಮಾರು 15 ಜನ ಕೂಲಿಕಾರರು ನೋಂದಣಿ ಮಾಡಿದರು.

ಈ ಸಂದರ್ಭದಲ್ಲಿ ಪಿಡಿಒ, ಟಿಎ, ಐಇಸಿ ಸಂಯೋಜಕರು ಹಾಗೂ ಇತರರು ಇದ್ದರು.

Address

Bidar
585403

Website

Alerts

Be the first to know and let us send you an email when Taluk Panchayat Kamalnagar posts news and promotions. Your email address will not be used for any other purpose, and you can unsubscribe at any time.

Share