04/06/2026
ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ (ರಿ), ಭಾಲ್ಕಿ ವತಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು *ನಾರಂಜ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಶ್ರೀ ಸೂರ್ಯಕಾಂತ್ ನಾಗಮಾರಪಳ್ಳಿ* ಅವರು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಮೂಲಕ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬಹುದು. ಇಂದು ಸನ್ಮಾನಗೊಳ್ಳುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಪರಿಶ್ರಮ, ಶಿಸ್ತು, ನಿರಂತರ ಅಭ್ಯಾಸ ಹಾಗೂ ಏಕಾಗ್ರತೆಯಿಂದ ಈ ಸಾಧನೆಯನ್ನು ಮಾಡಿದ್ದಾರೆ. ಇವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಹಾರೈಸಿದರು.
ಅಲ್ಲದೇ, ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿರುವ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ನ ಪದಾಧಿಕಾರಿಗಳು, ದಾನಿಗಳು ಹಾಗೂ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ ಅವರು, ಶಿಕ್ಷಣಕ್ಕೆ ನೀಡುವ ಪ್ರೋತ್ಸಾಹವು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಇಂದಿನ ಗೌರವವನ್ನು ತಮ್ಮ ಮುಂದಿನ ಸಾಧನೆಗಳಿಗೆ ಮೆಟ್ಟಿಲಾಗಿಸಿಕೊಳ್ಳಬೇಕು ಹಾಗೂ ತಮ್ಮ ತಂದೆ-ತಾಯಿಗಳು, ಗುರುಗಳು ಮತ್ತು ಸಮಾಜದ ಹೆಸರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವಂತೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಪ್ರತಿಭಾ ಪುರಸ್ಕಾರ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಭವಿಷ್ಯ ಉಜ್ವಲವಾಗಿರಲೆಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಗುರು ಬಸವ ಪಟ್ಟದ್ದೇವರು,ಶ್ರೀ ಬಾಳಪ್ಪ ನಂದಗಂವಿ ಜೀ, ಶ್ರೀ ಶಿವು ಲೋಖಂಡೆ, ಶ್ರೀ ಶಶಿಧರ್ ಕೋಸಂಬೆ, ಶ್ರೀ ಅಶೋಕ್ ಬಾವಗೆ, ಶ್ರೀ ಬಸವರಾಜ್ ದಾನ, ಡಾ. ಸಜ್ಜನ್ ಬಳತೆ, ಡಾ. ಜಗದೀಶ್ ಕಡದೆ, ಪಾಲಕರು, ಗಣ್ಯರು, ಶಿಕ್ಷಕರು,ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಯರು ಉಪಸ್ಥಿತರಿದ್ದರು.