R varun kumar chitradurga

R varun kumar chitradurga ಭಾರತೀಯ ಜನತಾ ಪಾರ್ಟಿ ಚಿತ್ರದುರ್ಗ ಜಿಲ್ಲಾ ಸಾಮಾಜಿಕ ಜಾಲತಾಣ ಸಹ ಸಂಚಾಲಕರು

"ಮೋದಿ ಜೀ ಸರ್ಕಾರದ GST ಸುಧಾರಣೆ ಭಾರತದ ಪ್ರಗತಿಯ ಯಶೋಗಾಥೆ"ಬೆಂಗಳೂರಿನಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠವು ಆಯೋಜಿಸಿದ್ದ   ಕಾರ್ಯಕ್ರಮ...
27/09/2025

"ಮೋದಿ ಜೀ ಸರ್ಕಾರದ GST ಸುಧಾರಣೆ
ಭಾರತದ ಪ್ರಗತಿಯ ಯಶೋಗಾಥೆ"

ಬೆಂಗಳೂರಿನಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠವು ಆಯೋಜಿಸಿದ್ದ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು. ಹೆಮ್ಮೆಯ ಪ್ರಧಾನಿ ಶ್ರೀ Narendra Modi ಜೀ ಅವರು ಕೈಗೊಂಡ GST ತೆರಿಗೆ ಕಡಿತಗೊಳಿಸುವ ಐತಿಹಾಸಿಕ ನಿರ್ಧಾರದಿಂದ ನಮ್ಮ ದೇಶದ ಬಡವರು, ಮಧ್ಯಮ ವರ್ಗದ ಜನರು, ಯುವಕರು, ರೈತರು, ಮಹಿಳೆಯರು, ವ್ಯಾಪಾರಿಗಳು, ಉದ್ಯಮಿಗಳು ಎಲ್ಲರೂ GST ಉಳಿತಾಯ ಉತ್ಸವದ ಬಹುದೊಡ್ಡ ಪ್ರಯೋಜನ ಪಡೆಯಲಿದ್ದು ನಮ್ಮ ಸಾಮಾಜಿಕ ಜಾಲತಾಣ ಕಾರ್ಯಕರ್ತರು ಹಾಗೂ Influencers ಗಳು ಮತ್ತಷ್ಟು ಪರಿಣಾಮಕಾರಿಯಾಗಿ ಎಲ್ಲೆಡೆ ಪಸರಿಸಿ ಜಾಗೃತಿ ಮೂಡಿಸಬೇಕೆಂಬ ಮನವಿ ಮಾಡಲಾಯಿತು.

ಭಾರತದ ಸ್ವಾತಂತ್ರ್ಯಕ್ಕೆ ಹೇಗೆ ಸ್ವದೇಶಿ ಮಂತ್ರದಿಂದ ಶಕ್ತಿ ದೊರೆಯಿತೋ, ಅದೇ ರೀತಿ ದೇಶದ ಸಮೃದ್ಧಿಗೂ ಸ್ವದೇಶಿ ಮಂತ್ರದಿಂದಲೇ ಶಕ್ತಿ ದೊರೆಯಲಿದ್ದು, ಮನೆ ಮನೆಗಳಲ್ಲೂ ಸ್ವದೇಶಿ, ಮನ ಮನಗಳಲ್ಲೂ ಸ್ವದೇಶಿ ವಸ್ತುಗಳನ್ನು ಬಳಸಿ ಬೆಂಬಲಿಸುವ ಸಂಕಲ್ಪ ಮಾಡಬೇಕೆಂಬ ಕರೆ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ Preetham J Gowda , ಪಕ್ಷದ ರಾಜ್ಯ ಸಾಮಾಜಿಕ ಜಾಲತಾಣ ಸಂಚಾಲಕರಾದ ಶ್ರೀ Prashant Makanur ಸೇರಿದಂತೆ ಸಾಮಾಜಿಕ ಜಾಲತಾಣ ಪ್ರಮುಖರು, ಕಾರ್ಯಕರ್ತರು ಹಾಗೂ ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದರು.

ಿತಾಯದಉತ್ಸವ

ನೂತನವಾಗಿ ಚುನಾಯಿತರಾದ ಬಿಜೆಪಿ ಸಂಘಟನಾತ್ಮಕ ಜಿಲ್ಲಾಧ್ಯಕ್ಷರಿಗೆ ಅಭಿನಂದನೆಗಳು.
11/06/2025

ನೂತನವಾಗಿ ಚುನಾಯಿತರಾದ ಬಿಜೆಪಿ ಸಂಘಟನಾತ್ಮಕ ಜಿಲ್ಲಾಧ್ಯಕ್ಷರಿಗೆ ಅಭಿನಂದನೆಗಳು.

ಹುಬ್ಬಳ್ಳಿಯ ಮಹಿಳಾ ಪಿಎಸ್ಐ ಶ್ರೀಮತಿ ಅನ್ನಪೂರ್ಣ ರವರ ಮಾತೃ ಹೃದಯದ ಆಕ್ರೋಶ ಸರಿಯಾಗಿಯೇ ಬಲಿ ತೆಗೆದುಕೊಂಡಿದೆ. ಆ ಮಹಿಳಾ ಅಧಿಕಾರಿಗೆ ರಾಜ್ಯದ ಎಲ...
13/04/2025

ಹುಬ್ಬಳ್ಳಿಯ ಮಹಿಳಾ ಪಿಎಸ್ಐ ಶ್ರೀಮತಿ ಅನ್ನಪೂರ್ಣ ರವರ ಮಾತೃ ಹೃದಯದ ಆಕ್ರೋಶ ಸರಿಯಾಗಿಯೇ ಬಲಿ ತೆಗೆದುಕೊಂಡಿದೆ.

ಆ ಮಹಿಳಾ ಅಧಿಕಾರಿಗೆ ರಾಜ್ಯದ ಎಲ್ಲಾ ನಾಗರಿಕರ ಪರವಾಗಿ ನನ್ನದೊಂದು ಸಲ್ಯೂಟ್.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪಕರಾದ ಪರಮ ಪೂಜ್ಯ ಡಾ. ಕೇಶವ ಬಲಿರಾಮ್ ಹೆಡ್ಗೆವಾರ್  ಅವರ 136 ನೇ ಜನ್ಮದಿನದಂದು, ನಾಗಪುರದಲ್ಲಿನ ಸ್ಮೃತಿ ಮಂ...
30/03/2025

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪಕರಾದ ಪರಮ ಪೂಜ್ಯ ಡಾ. ಕೇಶವ ಬಲಿರಾಮ್ ಹೆಡ್ಗೆವಾರ್ ಅವರ 136 ನೇ ಜನ್ಮದಿನದಂದು, ನಾಗಪುರದಲ್ಲಿನ ಸ್ಮೃತಿ ಮಂದಿರದಲ್ಲಿರುವ ಡಾ. ಜೀ ಅವರ ಸ್ಮಾರಕಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಭೇಟಿ ನೀಡಿ ಗೌರವ ಸಲ್ಲಿಸಿದರು.

ಪೂಜ್ಯ ಡಾ. ಕೇಶವ ಬಲಿರಾಮ್ ಹೆಡ್ಗೆವಾರ್ ಅವರ ಬದುಕಿನ ಆದರ್ಶ ಇಂದಿಗೂ ನಮ್ಮ ಹಿಂದೂ ಸಮಾಜಕ್ಕೆ ಪ್ರೇರಣೆ ಮತ್ತು ಶಕ್ತಿ.

ರೇಖಾ ಗುಪ್ತಾ, ದೆಹಲಿಯ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಬಾಲ್ಯದಿಂದಲೂ ಗುರುತಿಸಿಕೊಂಡವರು. ಆರೆಸ್ಸೆಸ್‌ನ ವ...
19/02/2025

ರೇಖಾ ಗುಪ್ತಾ, ದೆಹಲಿಯ ನೂತನ ಮುಖ್ಯಮಂತ್ರಿ

ರೇಖಾ ಗುಪ್ತಾ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಬಾಲ್ಯದಿಂದಲೂ ಗುರುತಿಸಿಕೊಂಡವರು. ಆರೆಸ್ಸೆಸ್‌ನ ವಿದ್ಯಾರ್ಥಿ ಘಟಕ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಮೂಲಕ ಅವರಿ ವಿದ್ಯಾರ್ಥಿ ರಾಜಕೀಯಕ್ಕೂ ಇಳಿದಿದ್ದರು.1994-95ರಲ್ಲಿ ದೌಲತ್‌ ರಾಮ್‌ ಕಾಲೇಜಿನ ಚುನಾವಣೆಯಲ್ಲಿ ಕಾರ್ಯದರ್ಶಿಯಾಗಿ ಆಯ್ಕೆಯಾದ ರೇಖಾ ಗುಪ್ತಾ, 1995-96ರಲ್ಲಿ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಘಟಕ (ಡಿಯುಎಸ್‌ಯು) ಕಾರ್ಯದರ್ಶಿಯಾಗಿದ್ದರು. 1996-97ರಲ್ಲಿ ಇದೇ ಘಟಕದ ಅಧ್ಯಕ್ಷರೂ ಆಗಿದ್ದರು.

2003-04ರಲ್ಲಿ ದೆಹಲಿ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿಯಾಗಿದ್ದ ರೇಖಾ ಗುಪ್ತಾ, 2004-06ರಲ್ಲಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ಕೂಡ ಆಗಿದ್ದರು. 2007ರ ಏಪ್ರಿಲ್‌ನಲ್ಲಿ ಉತ್ತರ ಪಿತಾಂಪುರದ ಬಿಜೆಪಿ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. 2010ರ ಮಾರ್ಚ್‌ನಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿದ್ದರು. ಪ್ರಸ್ತುತ ಇವರು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದು, ಶಾಲಿಮಾರ್‌ ಭಾಗ್‌ ವಾರ್ಡ್‌ನ ಪಾಲಿಕೆ ಸದಸ್ಯ ಕೂಡ ಆಗಿದ್ದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು , ಹೊಳಲ್ಕೆರೆ, ಚಿತ್ರದುರ್ಗ ಗ್ರಾಮಾಂತರ ಹಾಗು ಚಿತ್ರದುರ್ಗ ನಗರ ಮಂಡಲಗಳ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ತಮ್ಮೆ...
23/01/2025

ಚಿತ್ರದುರ್ಗ ಜಿಲ್ಲೆಯ ಹಿರಿಯೂರು , ಹೊಳಲ್ಕೆರೆ, ಚಿತ್ರದುರ್ಗ ಗ್ರಾಮಾಂತರ ಹಾಗು ಚಿತ್ರದುರ್ಗ ನಗರ ಮಂಡಲಗಳ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ತಮ್ಮೆಲ್ಲರಿಗೂ ತುಂಬು ಹೃದಯದ ಅಭಿನಂದನೆಗಳು.... 🎉🎉🌷🌷🧡🧡

ರಾಜ್ಯದ ಧೀಮಂತ ನಾಯಕ,ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ಗುರುತಿಸಲ್ಪಡುವ ಮಾನ್ಯ ಶ್ರೀ ಎಸ್.ಎಂ ಕೃಷ್ಣ ಅವರ ನಿಧನದ ಸುದ್ದಿ ಕೇಳಿ ...
10/12/2024

ರಾಜ್ಯದ ಧೀಮಂತ ನಾಯಕ,ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ಗುರುತಿಸಲ್ಪಡುವ ಮಾನ್ಯ ಶ್ರೀ ಎಸ್.ಎಂ ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ .
ಓಂ ಶಾಂತಿ

ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿಗಳಾಗಿ ಏಕನಾಥ್ ಶಿಂಧೆ & ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು...
05/12/2024

ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿಗಳಾಗಿ ಏಕನಾಥ್ ಶಿಂಧೆ & ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು

"ಓಂ ಶಾಂತಿ" ಟಾಟಾ ಸಂಸ್ಥೆಯ ಮೂಲಕ ದೇಶ ವಿದೇಶದಾದ್ಯಂತ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿ, ದೇಶದ ಆರ್ಥಿಕತೆಗೆ ತಮ್ಮದೇ ಆದ ಕೊಡುಗೆ ನೀಡುತ್ತಾ, ಕೋ...
09/10/2024

"ಓಂ ಶಾಂತಿ"

ಟಾಟಾ ಸಂಸ್ಥೆಯ ಮೂಲಕ ದೇಶ ವಿದೇಶದಾದ್ಯಂತ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿ, ದೇಶದ ಆರ್ಥಿಕತೆಗೆ ತಮ್ಮದೇ ಆದ ಕೊಡುಗೆ ನೀಡುತ್ತಾ, ಕೋಟ್ಯಾಂತರ ಜನರ ಪ್ರೀತಿ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿ ಪದ್ಮಭೂಷಣ ಪದ್ಮವಿಭೂಷಣ ಪ್ರಶಸ್ತಿಯ ಆದಿಯಾಗಿ ಅನೇಕ ಗೌರವ ಪ್ರಶಸ್ತಿ ಪಡೆದು ಯುವಪೀಳಿಗೆಗೆ ಮಾದರಿಯಾಗಿದ್ದ ಶ್ರೀ ರಥನ್ ಟಾಟಾ ಅವರ ಅಗಲುವಿಗೆ ದೇಶಕ್ಕೆ ತುಂಬಲಾರದ ನಷ್ಟ.

ಹಿರಿಯ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ ಮತ್ತು ಅವರ ಕುಟುಂಬಸ್ಥರಿಗೆ ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಕೇರಳದ ವಯನಾಡ್'ನಲ್ಲಿ ಇತ್ತೀಚಿನ ಭಾರೀ ಮಳೆಯಿಂದ ಉಂಟಾದ ಭೂಕುಸಿತದ ಪರಿಣಾಮ  ಗಾಯಗೊಂಡ ಸಂತ್ರಸ್ತರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ...
10/08/2024

ಕೇರಳದ ವಯನಾಡ್'ನಲ್ಲಿ ಇತ್ತೀಚಿನ ಭಾರೀ ಮಳೆಯಿಂದ ಉಂಟಾದ ಭೂಕುಸಿತದ ಪರಿಣಾಮ ಗಾಯಗೊಂಡ ಸಂತ್ರಸ್ತರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿ, ದೈರ್ಯ ತುಂಬಿದರು.

ಪ್ಯಾರಿಸ್ ನಲ್ಲಿ‌‌ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ 10 ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದಾಖಲೆ ಬರೆದ ಭಾರತದ ...
28/07/2024

ಪ್ಯಾರಿಸ್ ನಲ್ಲಿ‌‌ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ 10 ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದಾಖಲೆ ಬರೆದ ಭಾರತದ ಮನು ಭಾಕರ್ ಅವರಿಗೆ ಅಭಿನಂದನೆಗಳು.

09/07/2024

ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ "ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್" ಗೌರವಕ್ಕೆ ಪಾತ್ರರಾದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

Address

Chitradurga
577501

Website

Alerts

Be the first to know and let us send you an email when R varun kumar chitradurga posts news and promotions. Your email address will not be used for any other purpose, and you can unsubscribe at any time.

Share

Category