25/03/2026
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಧಾರವಾಡ ಇವರ ವತಿಯಿಂದ 25-03-2026 ರಂದು ಜಿಲ್ಲಾ ಪಂಚಾಯತ್ ಧಾರವಾಡದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ-ಮಾರಾಟ ಮೇಳವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀಮತಿ ಗರಿಮಾ ಪನ್ವರ್ ವ್ಯವಸ್ಥಾಪಕ ನಿರ್ದೇಶಕರು, ಕೆಎಚ್ಡಿಸಿ ಹುಬ್ಬಳ್ಳಿ ಹಾಗೂ ಅಧ್ಯಕ್ಷತೆಯನ್ನು ಶ್ರೀ ಪಾಟೀಲ ಭುವನೇಶ್ ದೇವಿದಾಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಧಾರವಾಡ ವಹಿಸಿದ್ದರು. ಅತಿಥಿಗಳಾದ ಶ್ರೀ ಮಲ್ಲಿಕಾರ್ಜುನ ತೊಗಲಬಾಗಿ, ಉಪಕಾರ ದರ್ಶಿಗಳು ,ಜಿಲ್ಲಾ ಪಂಚಾಯತ್ ,ಧಾರವಾಡ. ಹಾಗೂ ದೀಪಕ್ ಮಡಿವಾಳರ ಮುಖ್ಯ ಯೋಜನಾಧಿಕಾರಿಗಳು ಜಿಲ್ಲಾ ಪಂಚಾಯತ್ ಧಾರವಾಡ ಶ್ರೀಮತಿ ಲಲಿತಾ ಲಮಾಣಿ ಮುಖ್ಯ ಲೆಕ್ಕಾಧಿಕಾರಿಗಳು ಮತ್ತು ಎಲ್ಲಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗು ಇತರ ಗಣ್ಯರು ಉಪಸ್ಥಿತರಿದ್ದರು.
ಅತಿಥಿಗಳು ರಿಬ್ಬನ್ ಕಟ್ ಮಾಡುವ ಮೂಲಕ ಮೇಳಕ್ಕೆ ಚಾಲನೆ ನೀಡಿ, ಸ್ವಸಹಾಯ ಸಂಘದ ಮಹಿಳೆಯರ ಉತ್ಪನ್ನಗಳನ್ನು ವೀಕ್ಷಿಸಿ ಸಲಹೆಗಳನ್ನು ನೀಡಿದರು. ಬಳಿಕ ಸಭಾಂಗಣದಲ್ಲಿ ಗಿಡಕ್ಕೆ ನೀರು ಹಾಕುವ ಮೂಲಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಆರಂಭಗೊಂಡಿತು.
ಕಾರ್ಯಕ್ರಮದಲ್ಲಿ ಸಂಜೀವಿನಿ ಯೋಜನೆಯ ದಿನದರ್ಶಿಕೆ ಬಿಡುಗಡೆ, ಪ್ರಶಸ್ತಿ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ಜರುಗಿದವು.