Sanjeevini ksrlps dharwad

Sanjeevini ksrlps dharwad ಸಂಜೀವಿನಿ -KSRLPS -NRLM, ಜಿಲ್ಲಾ ಪಂಚಾಯತ್ ಧಾರವಾಡ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ...
25/03/2026

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಧಾರವಾಡ ಇವರ ವತಿಯಿಂದ 25-03-2026 ರಂದು ಜಿಲ್ಲಾ ಪಂಚಾಯತ್ ಧಾರವಾಡದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ-ಮಾರಾಟ ಮೇಳವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀಮತಿ ಗರಿಮಾ ಪನ್ವರ್ ವ್ಯವಸ್ಥಾಪಕ ನಿರ್ದೇಶಕರು, ಕೆಎಚ್‌ಡಿಸಿ ಹುಬ್ಬಳ್ಳಿ ಹಾಗೂ ಅಧ್ಯಕ್ಷತೆಯನ್ನು ಶ್ರೀ ಪಾಟೀಲ ಭುವನೇಶ್ ದೇವಿದಾಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಧಾರವಾಡ ವಹಿಸಿದ್ದರು. ಅತಿಥಿಗಳಾದ ಶ್ರೀ ಮಲ್ಲಿಕಾರ್ಜುನ ತೊಗಲಬಾಗಿ, ಉಪಕಾರ ದರ್ಶಿಗಳು ,ಜಿಲ್ಲಾ ಪಂಚಾಯತ್ ,ಧಾರವಾಡ. ಹಾಗೂ ದೀಪಕ್ ಮಡಿವಾಳರ ಮುಖ್ಯ ಯೋಜನಾಧಿಕಾರಿಗಳು ಜಿಲ್ಲಾ ಪಂಚಾಯತ್ ಧಾರವಾಡ ಶ್ರೀಮತಿ ಲಲಿತಾ ಲಮಾಣಿ ಮುಖ್ಯ ಲೆಕ್ಕಾಧಿಕಾರಿಗಳು ಮತ್ತು ಎಲ್ಲಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗು ಇತರ ಗಣ್ಯರು ಉಪಸ್ಥಿತರಿದ್ದರು.

ಅತಿಥಿಗಳು ರಿಬ್ಬನ್ ಕಟ್ ಮಾಡುವ ಮೂಲಕ ಮೇಳಕ್ಕೆ ಚಾಲನೆ ನೀಡಿ, ಸ್ವಸಹಾಯ ಸಂಘದ ಮಹಿಳೆಯರ ಉತ್ಪನ್ನಗಳನ್ನು ವೀಕ್ಷಿಸಿ ಸಲಹೆಗಳನ್ನು ನೀಡಿದರು. ಬಳಿಕ ಸಭಾಂಗಣದಲ್ಲಿ ಗಿಡಕ್ಕೆ ನೀರು ಹಾಕುವ ಮೂಲಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಆರಂಭಗೊಂಡಿತು.

ಕಾರ್ಯಕ್ರಮದಲ್ಲಿ ಸಂಜೀವಿನಿ ಯೋಜನೆಯ ದಿನದರ್ಶಿಕೆ ಬಿಡುಗಡೆ, ಪ್ರಶಸ್ತಿ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ಜರುಗಿದವು.

ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಪ್ರಶಿದ್ದವಾದ ಶ್ರೀ ರಾಮಲಿಂಗೇಶ್ವರ ಕಾಮಣ್ಣನ ಜಾತ್ರೆಯಲ್ಲಿ ತಾಲೂಕು  ಪಂಚಾಯತ ನವಲಗುಂದ ಮತ್ತು ಅಣ್ಣಿಗೇ...
02/03/2026

ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಪ್ರಶಿದ್ದವಾದ ಶ್ರೀ ರಾಮಲಿಂಗೇಶ್ವರ ಕಾಮಣ್ಣನ ಜಾತ್ರೆಯಲ್ಲಿ ತಾಲೂಕು ಪಂಚಾಯತ ನವಲಗುಂದ ಮತ್ತು ಅಣ್ಣಿಗೇರಿ ಹಾಗೂ ಗ್ರಾಮ ಪಂಚಾಯತ ಶಲವಡಿ ಇವರ ಸಹಯೋಗದಲ್ಲಿ ಸಂಜೀವಿನಿ ಮಾಸಿಕ ಸಂತೆಯನ್ನು ಹಮ್ಮಿಕೊಳ್ಳಲಾಯಿತು ಈ ಸಂದರ್ಭದಲ್ಲಿ ತಾಲೂಕು ಸಂಜೀವಿನಿ ಸಿಬ್ಬಂದಿಗಳು ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು

24/02/2026,  KCD ಕಾಲೇಜು ಧಾರವಾಡ ಆವರಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕೌಶಲ್ಯ ಮಿಷನ್, ಧಾರವಾಡ ಕೌಶಲ್ಯ ಅಭಿವೃದ್ಧಿ ಉದ್ಯಮಶ...
24/02/2026

24/02/2026, KCD ಕಾಲೇಜು ಧಾರವಾಡ ಆವರಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಹಾಗೂ ಕೌಶಲ್ಯ ಮಿಷನ್, ಧಾರವಾಡ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಬೆಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ " ಉದ್ಯೋಗ ಮೇಳ -2026 ವನ್ನು ಸನ್ಮಾನ್ಯ ಶ್ರೀ ಸಂತೋಷ್ ಎಸ್ ಲಾಡ್ ಮಾನ್ಯ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಕರ್ನಾಟಕ ಸರ್ಕಾರ ಬೆಂಗಳೂರು ರವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ಜಿಲ್ಲಾ ಧಾರವಾಡ, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಧಾರವಾಡ ರವರು ಉಪಸ್ಥಿತರಿದ್ದರು.

18/02/2026

ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಧಾರವಾಡ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಡಿಡಿಯು ಜಿ ಕೆ ವೈ ಯೋಜನೆ ಅಡಿಯಲ್ಲಿ 2026ರ ಮಹಾ ಉದ್ಯೋಗ ಮೇಳವನ್ನು ಇದೇ ತಿಂಗಳ 22ನೇ ತಾರೀಕು ರವಿವಾರ ಬೆಳಗ್ಗೆ 9:00 ರಿಂದ ಸಂಜೆ 5:00ರವರೆಗೆ ಧಾರವಾಡದ ಕೆ ಸಿ ಡಿ ಸೃಜನರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.

ಧಾರವಾಡ ಜಿಲ್ಲೆಯ ಎಲ್ಲ ಕೃಷಿ ಸಖಿಯರಿಗೆ, ಬಿಸಿ ಸಖಿಯರಿಗೆ, ಬಿ.ಅರ್.ಪಿ ಇ.ಪಿ ಗಳಿಗೆ ಧಾರವಾಡ ತಾಲೂಕಿನ ಸಾಮರ್ಥ್ಯ ಸೌಧದಲ್ಲಿ ಲಕಪತಿ ದೀದೀ ಕುರಿತ...
13/02/2026

ಧಾರವಾಡ ಜಿಲ್ಲೆಯ ಎಲ್ಲ ಕೃಷಿ ಸಖಿಯರಿಗೆ, ಬಿಸಿ ಸಖಿಯರಿಗೆ, ಬಿ.ಅರ್.ಪಿ ಇ.ಪಿ ಗಳಿಗೆ ಧಾರವಾಡ ತಾಲೂಕಿನ ಸಾಮರ್ಥ್ಯ ಸೌಧದಲ್ಲಿ ಲಕಪತಿ ದೀದೀ ಕುರಿತು ಒಂದು ದಿನದ ತರಬೇತಿ ನೀಡಲಾಯಿತು...
ಸದರಿ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ವ್ಯವಸ್ಥಾಪಕರು ( IBCB), , ಧಾರವಾಡ ತಾಲೂಕು ಅಭಿಯಾನ ನಿರ್ವಹಣ ಘಟಕದ ಸಿಬ್ಬಂದಿಗಳು ಹಾಜರಿದ್ದರು....
ಸದರಿ ತರಬೇತಿಗೆ ಸಂಪನ್ಮೂಲ ವ್ಯಕ್ತಿಗಳಾಗಿ
ಶ್ರೀ ರವಿಕುಮಾರ ಮಡಿವಾಳರ (CS) ಧಾರವಾಡ
ಶ್ರೀ ನಾಗಪ್ಪ ಹಂಚಿನಮನಿ (TPM)‌ ಹುಬ್ಬಳ್ಳಿ ಆಗಮಿಸಿದ್ದರು.

ಧಾರವಾಡ ಜಿಲ್ಲೆಯ ಎಲ್ಲ ಪಶು ಸಖಿಯರಿಗೆ ಲಕಪತಿ ದೀದೀ ಕುರಿತು ಒಂದು ದಿನದ ತರಬೇತಿ ನೀಡಲಾಯಿತು...ಸದರಿ ಕಾರ್ಯಕ್ರಮವನ್ನು ಮಾನ್ಯ ಕಾರ್ಯನಿರ್ವಾಹಕ ...
12/02/2026

ಧಾರವಾಡ ಜಿಲ್ಲೆಯ ಎಲ್ಲ ಪಶು ಸಖಿಯರಿಗೆ ಲಕಪತಿ ದೀದೀ ಕುರಿತು ಒಂದು ದಿನದ ತರಬೇತಿ ನೀಡಲಾಯಿತು...ಸದರಿ ಕಾರ್ಯಕ್ರಮವನ್ನು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತ ಧಾರವಾಡ ರವರು ಉದ್ಘಾಟನೆ ಮಾಡಿದರು.
ಸದರಿ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ವ್ಯವಸ್ಥಾಪಕರು ( IBCB), ಜಿಲ್ಲಾ ವ್ಯವಸ್ಥಾಪಕರು (Skill and FI), ಧಾರವಾಡ ತಾಲೂಕು ನಿರ್ವಹಣ ಘಟಕದ ಎಲ್ಲ ಸಿಬ್ಬಂದಿಗಳು ಹಾಜರಿದ್ದರು....
ಸದರಿ ತರಬೇತಿಗೆ ಸಂಪನ್ಮೂಲ ವ್ಯಕ್ತಿಗಳಾಗಿ
ಶ್ರೀ ರವಿಕುಮಾರ ಮಡಿವಾಳರ (CS) ಧಾರವಾಡ
ಶ್ರೀ ನಾಗಪ್ಪ ಹಂಚಿನಮನಿ (TPM) ಆಗಮಿಸಿದ್ದರು.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ  ಶಿರಕೋಳ ಗ್ರಾಮ ಪಂಚಾಯತ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದಿಂದ  ಸಂಜೀವಿನಿ ಮಾಸಿಕ ಸಂತೆಯನ್ನು ಏರ್ಪಡಿಸಲಾಯ...
06/02/2026

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮ ಪಂಚಾಯತ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಂಜೀವಿನಿ ಮಾಸಿಕ ಸಂತೆಯನ್ನು ಏರ್ಪಡಿಸಲಾಯಿತು . ಈ ಮಾಸಿಕ ಸಂತೆಯನ್ನು .ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿ ಉದ್ಘಾಟನೆ ಮಾಡಿ ಮಾಸಿಕ ಸಂತೆಗೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ತಾಲೂಕ ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು. ನವಲಗುಂದ ತಾಲೂಕಿನ ಸ್ವ‌ ಸಹಾಯ ಸಂಘದ ಸದಸ್ಯರು ಭಾಗವಹಿಸಿ ತಾವು ತಯಾರಿಸಿದಂತಹ ಉತ್ಪಾದನಾ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡುವುದರ ಮೂಲಕ ನವಲಗುಂದ ತಾಲೂಕಿನ ಎಲ್ಲ ಒಕ್ಕೂಟದ ಸಿಬ್ಬಂದಿಗಳು ಸ್ವ ಸಹಾಯ ಸಂಘದ ಮಹಿಳೆಯರು ಸೇರಿ ಈ ಮಾಸಿಕ ಸಂತೆಯನ್ನು ಯಶಸ್ವಿಗೊಳಿಸಲಾಯಿತು.

ಧಾರವಾಡ ಜಿಲ್ಲೆಯ ಧಾರವಾಡ ತಾಲೂಕಿನ ಗರಗ ಗ್ರಾಮ ಪಂಚಾಯತ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದಿಂದ ಶ್ರೀ ಗುರು ಮಡಿವಾಳೇಶ್ವರ ಜಾತ್ರಾ ಮಹೋತ್ಸವದ ನಿಮ...
05/02/2026

ಧಾರವಾಡ ಜಿಲ್ಲೆಯ ಧಾರವಾಡ ತಾಲೂಕಿನ ಗರಗ ಗ್ರಾಮ ಪಂಚಾಯತ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟದಿಂದ ಶ್ರೀ ಗುರು ಮಡಿವಾಳೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಸಂಜೀವಿನಿ ಮಾಸಿಕ ಸಂತೆಯನ್ನು ಏರ್ಪಡಿಸಲಾಯಿತು . ಈ ಮಾಸಿಕ ಸಂತೆಯನ್ನು .ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶ್ರೀ ವಿನೋದ್ ಗಾಮನಗಟ್ಟಿ ಜಿಲ್ಲಾ ವ್ಯವಸ್ಥಾಪಕರು ಭಾಗವಹಿಸಿ ಉದ್ಘಾಟನೆ ಮಾಡಿ ಮಾಸಿಕ ಸಂತೆಗೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ತಾಲೂಕ ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿಗಳು. MKPC ಸಿಬ್ಬಂದಿಗಳು. ಉಪಸ್ಥಿತರಿದ್ದರು.ಧಾರವಾಡ ಹಾಗೂ ಅಳ್ಳಾವರ ತಾಲೂಕಿನ ಸ್ವ‌ ಸಹಾಯ ಸಂಘದ ಸದಸ್ಯರು ಭಾಗವಹಿಸಿ ತಾವು ತಯಾರಿಸಿದಂತಹ ಉತ್ಪಾದನಾ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡುವುದರ ಮೂಲಕ ಧಾರವಾಡ ಹಾಗೂ ಅಳ್ಳಾವರ ತಾಲೂಕಿನ ಎಲ್ಲ ಒಕ್ಕೂಟದ ಸಿಬ್ಬಂದಿಗಳು ಸ್ವ ಸಹಾಯ ಸಂಘದ ಮಹಿಳೆಯರು ಸೇರಿ ಈ ಮಾಸಿಕ ಸಂತೆಯನ್ನು ಯಶಸ್ವಿಗೊಳಿಸಲಾಯಿತು.

ಧಾರವಾಡ ಜಿಲ್ಲಾ ಕುಂದಗೋಳ ತಾಲೂಕು ಮಳಲಿ ಗ್ರಾಮ ಪಂಚಾಯತ್ ಮಟ್ಟದ ಕುಂಕುರು ಗ್ರಾಮದಲ್ಲಿ ಶ್ರೀ ತಾಯಮ್ಮ ದೇವಿ ಜಾತ್ರೆ ಮಹೋತ್ಸವ ದಲ್ಲಿ  ಸಂಜೀವಿನಿ...
15/01/2026

ಧಾರವಾಡ ಜಿಲ್ಲಾ ಕುಂದಗೋಳ ತಾಲೂಕು ಮಳಲಿ ಗ್ರಾಮ ಪಂಚಾಯತ್ ಮಟ್ಟದ ಕುಂಕುರು ಗ್ರಾಮದಲ್ಲಿ ಶ್ರೀ ತಾಯಮ್ಮ ದೇವಿ ಜಾತ್ರೆ ಮಹೋತ್ಸವ ದಲ್ಲಿ ಸಂಜೀವಿನಿ ಮಾಸಿಕ ಸಂತೆಯನ್ನು ಏರ್ಪಡಿಸಲಾಯಿತು ಈ ಮಾಸಿಕ ಸಂತೆಯನ್ನು ಚಾಲನೆ ನೀಡಲು ಮಳಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಒಕ್ಕೂಟದ ಅಧ್ಯಕ್ಷರು ಹಾಗೂ ಸಂಜೀವಿನಿ ತಾಲೂಕು ಅಭಿಯಾನ ನಿರ್ವಹಣಾ ಘಟಕ ದಿಂದ ವಲಯ ಮೇಲ್ವಿಚಾರಕರಾದಂತಹ ರವಿಕುಮಾರ್ ಉದ್ಘಾಟನೆ ಮಾಡಿ ಸಭೆಗೆ ಚಾಲನೆ ನೀಡಿದರು ಈ ಸಂತೆಯಲ್ಲಿ ಮಳಲಿ ಮತ್ತಿಗಟ್ಟಿ ಗುರುವಿನ ಹಳ್ಳಿ ಯಲಿವಾಳ ರಾಮನಕೊಪ್ಪ ಕುಬಿಹಾಳ, ಗ್ರಾಮ ಪಂಚಾಯಿತಿಯ ಒಕ್ಕೂಟದಲ್ಲಿ ತಯಾರಾಗಿರುವ ಉತ್ಪನ್ನದ ಮಳಿಗೆಗಳೊಂದಿಗೆ ಸಿಬ್ಬಂದಿಗಳು ಹಾಗೂ ಸಂಘದ ಸದಸ್ಯರು ಈ ಸಂತೆ ಯಲ್ಲಿ ಭಾಗವಹಿಸಿ ತಾವು ತಯಾರಿಸಿದಂತಹ ಸಾಮಗ್ರಿಗಳನ್ನು ಮಾರಾಟ ಮಾಡಿದರು, ಮಹಿಳಾ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿ ಈ ಮಾಸಿಕ ಸಂತೆಯನ್ನು ಯಶಸ್ವಿಗೊಳಿಸಲಾಯಿತು

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ .ಜೀವನೋಪಾಯ ಇಲಾಖೆ ಜಿಲ್ಲಾ ಪಂಚಾಯತ ಧಾರವಾಡ ಸಂಜೀವಿನಿ ತಾಲೂಕು ಅಭಿ...
13/01/2026

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ .ಜೀವನೋಪಾಯ ಇಲಾಖೆ ಜಿಲ್ಲಾ ಪಂಚಾಯತ ಧಾರವಾಡ ಸಂಜೀವಿನಿ ತಾಲೂಕು ಅಭಿಯಾನ ನಿರ್ವಹಣಾ ಘಟಕ ತಾಲೂಕ ಪಂಚಾಯತ ಧಾರವಾಡ. ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟ ಗರಗ. ಇವರುಗಳ ಸಹಯೋಗದೊಂದಿಗೆ ತಾಲೂಕ್ ಪಂಚಾಯತ್ ಆವರಣದ ಮುಂಭಾಗದಲ್ಲಿ ಮಕರ ಸಂಕ್ರಮನ ಹಬ್ಬದ ಪ್ರಯುಕ್ತ ಮಾಸಿಕ ಸಂತೆಯನ್ನು ಹಮ್ಮಿಕೊಂಡಿದ್ದು . ಶ್ರೀ ಅರವಿಂದ ಏಗನಗೌಡರ . ಗ್ಯಾರೆಂಟಿ ಯೋಜನೆಯ ಅಧ್ಯಕ್ಷರು ತಾಲೂಕು ಪಂಚಾಯತ್ ಧಾರವಾಡ .ಶ್ರೀ ಚಂದ್ರು ಪೂಜಾರ ಸಹಾಯಕ ನಿರ್ದೇಶಕರು ನರೇಗಾ .ಶ್ರೀ ವಿನೋದ್ ಕಂಠಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಜಿಲ್ಲಾ ಪಂಚಾಯತ್ ಧಾರವಾಡ ಜಿಲ್ಲಾ ವ್ಯವಸ್ಥಾಪಕರಾದ ಶ್ರೀ ಮಹೇಶ್ ಪಾಟೀಲ್ ಶ್ರೀ ವಿನೋದ ಗಾಮನಗಟ್ಟಿ..ರಿಬ್ಬನ್ ಕತ್ತರಿಸುವ ಮೂಲಕ ಮಾಸಿಕ ಸಂತೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು . ಸ್ವಸಹಾಯ ಸಂಘದ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅವರಿಗೆ ಪ್ರೋತ್ಸಾಹ ಮತ್ತು ಬೆಂಬಲವನ್ನು ನೀಡಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಗ್ಯಾರಂಟಿ ಕಾ...
05/01/2026

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವವನ್ನು ಜನೆವರಿ 5, 2026 ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡ ಕೆ.ಸಿ.ಡಿ ಕಾಲೇಜು ಆವರಣದಲ್ಲಿರುವ ಶ್ರೀ ಅಣ್ಣಾಜಿರಾವ ಶಿರೂರ (ಸೃಜನಾ) ರಂಗಮಂದಿರದಲ್ಲಿ ಆಯೋಜಿಸಲಾಗಿದ್ದು, ಸದರಿ ಈ ಕಾರ್ಯಕ್ರಮದಲ್ಲಿ ಸ್ವ ಸಹಾಯ ಸಂಘದ ಮಹಿಳೆಯರು ತಾವು ತಯಾರಿಸಿದ ಉತ್ಪಾದಗಳ ಜೊತೆಗೆ ಬಂದು, ವಸ್ತು ಪ್ರದರ್ಶನ ಮತ್ತು ಮಾರಾಟವನ್ನು ಮಾಡಿದರು.

ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರು ಸ್ವಸಹಾಯ ಸಂಘದ ಮಳಿಗೆಗಳನ್ನು ಉದ್ಘಾಟಿಸಿದರು.

Address

Dharwad
580001

Alerts

Be the first to know and let us send you an email when Sanjeevini ksrlps dharwad posts news and promotions. Your email address will not be used for any other purpose, and you can unsubscribe at any time.

Share