Dr. Nagalakshmi ಡಾ. ನಾಗಲಕ್ಷ್ಮಿ

Dr. Nagalakshmi ಡಾ. ನಾಗಲಕ್ಷ್ಮಿ Chairperson Karnataka State Commission for Women|Paediatric Dentist|Professor|
(9)

ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ-ಮಗು ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳು, ಚಿಕಿತ್ಸಾ ವ್ಯವಸ್ಥೆ ಹಾಗೂ ರೋಗಿಗಳ ಅಭಿಪ್ರಾಯಗಳನ್ನು...
14/06/2026

ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ-ಮಗು ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳು, ಚಿಕಿತ್ಸಾ ವ್ಯವಸ್ಥೆ ಹಾಗೂ ರೋಗಿಗಳ ಅಭಿಪ್ರಾಯಗಳನ್ನು ಆಲಿಸಿದೆ.

ರೋಗಿಗಳು ಮತ್ತು ಅವರ ಕುಟುಂಬಸ್ಥರು, ವೈದ್ಯರು ಹಾಗೂ ಸಿಬ್ಬಂದಿಯ ಸೇವೆ, ಚಿಕಿತ್ಸೆಯ ಗುಣಮಟ್ಟ ಮತ್ತು ಮಾನವೀಯ ಸ್ಪಂದನೆ ಕುರಿತು ವ್ಯಕ್ತಪಡಿಸಿದ ಮೆಚ್ಚುಗೆ ಆರೋಗ್ಯ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯ ಕಾರ್ಯನಿಷ್ಠೆ ಅಭಿನಂದನಾರ್ಹವಾಗಿದೆ.

ಪರಿಶೀಲನೆ ವೇಳೆ ಎಂಆರ್‌ಐ (MRI) ಸೌಲಭ್ಯ ಕೊರತೆ ಗಮನಕ್ಕೆ ಬಂದಿದ್ದು, ಈ ಕುರಿತು ಸರ್ಕಾರದ ಗಮನ ಸೆಳೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ.

ಈ ಸಂದರ್ಭದಲ್ಲಿ ಹಲವರು ತಮ್ಮ ಅಹವಾಲುಗಳು ಮತ್ತು ಸಮಸ್ಯೆಗಳನ್ನು ನನ್ನ ಮುಂದಿಟ್ಟರು. ಅವುಗಳನ್ನು ಪರಿಶೀಲಿಸಿ, ಸಂಬಂಧಿತ ಇಲಾಖೆಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇನೆ.





ಕೃಪಾನಿಧಿ ಫಿಸಿಯೋಥೆರಪಿ ಕಾಲೇಜಿನಲ್ಲಿ ಆಯೋಜಿಸಿದ್ದ KRUPTACON 2026 ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ, ಉತ್ಸಾಹಿ ವಿದ್ಯಾರ್ಥಿಗಳು ಮತ...
13/06/2026

ಕೃಪಾನಿಧಿ ಫಿಸಿಯೋಥೆರಪಿ ಕಾಲೇಜಿನಲ್ಲಿ ಆಯೋಜಿಸಿದ್ದ KRUPTACON 2026 ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ, ಉತ್ಸಾಹಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರೊಂದಿಗೆ ಸಂವಾದ ನಡೆಸಿದ ಅಪೂರ್ವ ಕ್ಷಣಗಳು.

ಫಿಸಿಯೋಥೆರಪಿಸ್ಟ್‌ಗಳು ಕೇವಲ ಚಿಕಿತ್ಸೆ ನೀಡುವುದಿಲ್ಲ. ಅವರು ಮನುಷ್ಯನ ಗೌರವ ಮತ್ತು ಬದುಕಿನ ಭರವಸೆಯನ್ನು ಮರುಸ್ಥಾಪಿಸುತ್ತಾರೆ. ನಿಜಕ್ಕೂ ಅವರ ಕಾರ್ಯ ಶ್ಲಾಘನೀಯ.





ಬೆಂಗಳೂರಿನ ಕಾವೇರಿ ಭವನದಲ್ಲಿ ಜನಸ್ಪಂದನ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ...
12/06/2026

ಬೆಂಗಳೂರಿನ ಕಾವೇರಿ ಭವನದಲ್ಲಿ ಜನಸ್ಪಂದನ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದೆನು.‌

​ಮಹಿಳೆಯರ ಹಕ್ಕುಗಳ ರಕ್ಷಣೆ ಮತ್ತು ಶೀಘ್ರ ನ್ಯಾಯ ದೊರಕಿಸುವುದು ನನ್ನ ಪ್ರಮುಖ ಆದ್ಯತೆಯಾಗಿದ್ದು, ಪ್ರತಿಯೊಂದು ಅಹವಾಲಿಗೂ ಸ್ಪಂದಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.





12/06/2026
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳೆಯರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿದೆ.ಮಹಿಳೆಯರ ಹಕ್ಕುಗಳ ರಕ್ಷಣೆ ಹಾಗೂ ತ್ವರಿ...
11/06/2026

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳೆಯರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿದೆ.

ಮಹಿಳೆಯರ ಹಕ್ಕುಗಳ ರಕ್ಷಣೆ ಹಾಗೂ ತ್ವರಿತ ನ್ಯಾಯ ಒದಗಿಸುವುದು ನಮ್ಮ ಆದ್ಯತೆಯಾಗಿದ್ದು, ಸ್ಥಳದಲ್ಲೇ ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಸೂಚನೆ ನೀಡಿದ್ದೇನೆ.





ಸಮಗ್ರ ಶಿಕ್ಷಣ ಕರ್ನಾಟಕವು ಅಪ್ಯಾರಲ್ಸ್, ರಿಟೇಲ್ ಹಾಗೂ ಬ್ಯೂಟಿ & ವೆಲ್ನೆಸ್ ಕೋರ್ಸ್‌ಗಳನ್ನು ಇದ್ದಕ್ಕಿದ್ದಂತೆ ಸ್ಥಗಿತಗೊಳಿಸಲು ಕೈಗೊಂಡಿರುವ ನ...
10/06/2026

ಸಮಗ್ರ ಶಿಕ್ಷಣ ಕರ್ನಾಟಕವು ಅಪ್ಯಾರಲ್ಸ್, ರಿಟೇಲ್ ಹಾಗೂ ಬ್ಯೂಟಿ & ವೆಲ್ನೆಸ್ ಕೋರ್ಸ್‌ಗಳನ್ನು ಇದ್ದಕ್ಕಿದ್ದಂತೆ ಸ್ಥಗಿತಗೊಳಿಸಲು ಕೈಗೊಂಡಿರುವ ನಿರ್ಧಾರದ ವಿರುದ್ಧ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 100ಕ್ಕೂ ಹೆಚ್ಚು ವೃತ್ತಿಪರ ತರಬೇತುದಾರರು ನನ್ನನ್ನು ಭೇಟಿ ಮಾಡಿ ತಮ್ಮ ಅಳಲನ್ನು ವ್ಯಕ್ತಪಡಿಸಿದರು. 2014ರಿಂದಲೂ 30,000ಕ್ಕೂ ಹೆಚ್ಚು ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವಲ್ಲಿ ಈ ತರಬೇತುದಾರರು ಮಹತ್ವದ ಪಾತ್ರ ವಹಿಸಿದ್ದಾರೆ.

ಈ ತೀರ್ಮಾನದಿಂದ 262 ತರಬೇತುದಾರರ ಬದುಕು ಕತ್ತಲಿಗೆ ದೂಡಲ್ಪಟ್ಟಿದೆ. ಇವರಲ್ಲಿ ಅನೇಕರು ವಿಧವೆಯರು, ಏಕಪೋಷಕ ತಾಯಂದಿರು ಮತ್ತು ಕುಟುಂಬದ ಏಕೈಕ ಆದಾಯದ ಮೂಲವಾಗಿದ್ದಾರೆ.

ಈ ಗಂಭೀರ ವಿಷಯದ ಕುರಿತು ನಾನು ಈಗಾಗಲೇ ಆಯುಕ್ತರೊಂದಿಗೆ ಮಾತನಾಡಿದ್ದೇನೆ. ಇದನ್ನು ಮಾನ್ಯ ಮುಖ್ಯಮಂತ್ರಿಗಳು ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ (NCW) ಗಮನಕ್ಕೆ ತಂದು, 262 ಕುಟುಂಬಗಳ ಉದ್ಯೋಗ ರಕ್ಷಣೆ ಹಾಗೂ ವಿದ್ಯಾರ್ಥಿಗಳ ಕೌಶಲ್ಯ ಶಿಕ್ಷಣ ನಿರಂತರವಾಗಿ ಮುಂದುವರಿಯುವಂತೆ ಸೂಕ್ತ ಪರಿಹಾರ
ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವ ಸಂಪೂರ್ಣ ಭರವಸೆಯನ್ನು ನೀಡಿದ್ದೇನೆ.





ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಹಾಗೂ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ...
09/06/2026

ಚನ್ನಗಿರಿ ತಾಲೂಕಿನ ಬಸವಾಪಟ್ಟಣದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಹಾಗೂ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ವಿಕೃತ ಕೃತ್ಯವು ನಾಗರಿಕ ಸಮಾಜವೇ ತಲೆತಗ್ಗಿಸುವಂತದ್ದಾಗಿದೆ. ಈ ಹೇಯ ಕೃತ್ಯವನ್ನು ನಾನು ವೈಯಕ್ತಿಕವಾಗಿ ಹಾಗೂ ರಾಜ್ಯ ಮಹಿಳಾ ಆಯೋಗದ ಪರವಾಗಿ ತೀವ್ರವಾಗಿ ಖಂಡಿಸುತ್ತೇನೆ.

ಈ ಘಟನೆಯನ್ನು ನಾನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಕ್ಷಣವೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ವರದಿ ಸಲ್ಲಿಸುವಂತೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (SP) ಪತ್ರದ ಮೂಲಕ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದೇನೆ.

ಮಹಿಳೆಯರ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಲಿ.





ಹೆಣ್ಣು ಮಗು ಶಿಕ್ಷಣ, ಆತ್ಮವಿಶ್ವಾಸ ಮತ್ತು ಅವಕಾಶಗಳಿಂದ ಸಬಲಗೊಂಡಾಗ ಮಾತ್ರ ಸಮಾಜದ ನಿಜವಾದ ಪ್ರಗತಿ ಸಾಧ್ಯ ಎಂಬುದು ನನ್ನ ದೃಢ ನಂಬಿಕೆ.ವಿಜಯಪುರ...
09/06/2026

ಹೆಣ್ಣು ಮಗು ಶಿಕ್ಷಣ, ಆತ್ಮವಿಶ್ವಾಸ ಮತ್ತು ಅವಕಾಶಗಳಿಂದ ಸಬಲಗೊಂಡಾಗ ಮಾತ್ರ ಸಮಾಜದ ನಿಜವಾದ ಪ್ರಗತಿ ಸಾಧ್ಯ ಎಂಬುದು ನನ್ನ ದೃಢ ನಂಬಿಕೆ.

ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾ ಕುರುಬ ಸಮಾಜದ ವತಿಯಿಂದ ಆಯೋಜಿಸಿದ್ದ ಅಹಲ್ಯಾದೇವಿ ಹೋಳ್ಕರ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದೆ.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಚಿವರಾದ ಶ್ರೀ ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ಶ್ರೀ ಉಮೇಶ ಮೇಟಿ, ಶ್ರೀ ಚಂದ್ರಶೇಖರ ನುಗ್ಗಲಿ, ಶ್ರೀ ಜಿ. ಬಿ. ವಿನಯಕುಮಾರ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.


ಇಂದು ನನ್ನ ಗೃಹ ಕಚೇರಿಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಅಗತ್ಯ ಕ್...
08/06/2026

ಇಂದು ನನ್ನ ಗೃಹ ಕಚೇರಿಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಮಹಿಳೆಯರ ಹಕ್ಕುಗಳ ರಕ್ಷಣೆ ಮತ್ತು ಶೀಘ್ರ ನ್ಯಾಯ ದೊರಕಿಸುವುದು ನನ್ನ ಪ್ರಮುಖ ಆದ್ಯತೆಯಾಗಿದ್ದು, ಪ್ರತಿಯೊಂದು ಅಹವಾಲಿಗೂ ಸ್ಪಂದಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.

ಈ ವೇಳೆ ಹಲವಾರು ಹಿತೈಷಿಗಳು ಹಾಗೂ ಸಾರ್ವಜನಿಕರು ವಿವಿಧ ಕಾರ್ಯಕ್ರಮಗಳಿಗೆ ಆತ್ಮೀಯವಾಗಿ ಆಹ್ವಾನಿಸಿದರು.





ಎಐಸಿಸಿ ಕಾರ್ಯದರ್ಶಿಗಳಾದ ಶ್ರೀ ಸೂರಜ್ ಹೆಗ್ಡೆ ಕೇವಲ ಒಬ್ಬ ನಾಯಕರಾಗಿರಲಿಲ್ಲ; ದೇವರಾಜ ಅರಸು ಅವರ ಸಿದ್ಧಾಂತಗಳನ್ನು ಉಸಿರಾಡಿದವರು, ಸರಳತೆ ಮತ್ತ...
08/06/2026

ಎಐಸಿಸಿ ಕಾರ್ಯದರ್ಶಿಗಳಾದ ಶ್ರೀ ಸೂರಜ್ ಹೆಗ್ಡೆ ಕೇವಲ ಒಬ್ಬ ನಾಯಕರಾಗಿರಲಿಲ್ಲ; ದೇವರಾಜ ಅರಸು ಅವರ ಸಿದ್ಧಾಂತಗಳನ್ನು ಉಸಿರಾಡಿದವರು, ಸರಳತೆ ಮತ್ತು ಎಲ್ಲರನ್ನೂ ಸುಲಭವಾಗಿ ತಲುಪುವ ಸಹೃದಯಿ ವ್ಯಕ್ತಿತ್ವದ ಅಪರೂಪದ ರಾಜಕಾರಣಿಯಾಗಿದ್ದರು. ಅವರ ಅಗಲಿಕೆ ವೈಯಕ್ತಿಕವಾಗಿ ನನಗೂ ಕೂಡ ತುಂಬಲಾರದ ನಷ್ಟ.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ, ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

Address

Dharwad
Bangalore
580001

Alerts

Be the first to know and let us send you an email when Dr. Nagalakshmi ಡಾ. ನಾಗಲಕ್ಷ್ಮಿ posts news and promotions. Your email address will not be used for any other purpose, and you can unsubscribe at any time.

Share