07/04/2025
ಇಂದು ಗಂಗಾವತಿ ತಾ.ಪಂ ಮಂಥನ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಪ್ರಗತಿ ಕಾರ್ಯಗಳ ವರದಿಯನ್ನು ಒಪ್ಪಿಸಿದರು.
ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ತಡೆಯಲು, ಖಾಸಗಿ ಹಾಗೂ ರೈತರ ಬೋರ್ವೆಲ್ಗಳನ್ನು ಬಳಸುವಂತೆ ಸೂಚಿಸಲಾಯಿತು. ಕುಡಿಯುವ ನೀರಿನ ಸಮಸ್ಯೆ ಸಂಬಂಧ ಸಹಾಯವಾಣಿಯನ್ನು ಪ್ರಾರಂಭಿಸಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದೆ. (ಸಹಾಯವಾಣಿ 6361940327 ಹಾಗೂ 8197895571)
ಜೆ.ಜೆ.ಎಂ. ಯೋಜನೆಯಡಿಯಲ್ಲಿ ನಡೆದ ಕಳಪೆ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಯಿತು. ಗುತ್ತಿಗೆದಾರರ ವಿರುದ್ಧ ಎಫ್ಐಆರ್ ದಾಖಲಿಸದಿದ್ದರೆ, ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂಬ ಎಚ್ಚರಿಕೆ ನೀಡಲಾಯಿತು. ಜೊತೆಗೆ, ಕಳಪೆ ಕಾಮಗಾರಿಗಳನ್ನು ತಿದ್ದುಪಡಿ ಮಾಡಲು ಸೂಚಿಸಲಾಯಿತು.
ವಡ್ಡರಹಟ್ಟಿಯ 108 ಎಕರೆ ಅತಿಕ್ರಮಿತ ಭೂಮಿಯನ್ನು ತೆರವುಗೊಳಿಸಿ, ಕೆರೆ ನಿರ್ಮಾಣ ಹಾಗೂ ವಸತಿ ಯೋಜನೆಗಾಗಿ ಬಳಸುವಂತೆ ಆದೇಶಿಸಲಾಯಿತು.
ಶಾಲೆಗಳಲ್ಲಿ ಶೌಚಾಲಯ, ಕಾಂಪೌಂಡ್, ಆಟದ ಮೈದಾನ ಮತ್ತು ಅಡುಗೆ ಕೋಣೆಗಳ ಕೊರತೆ ಇರುವುದರಿಂದ, ನರೇಗಾ ಯೋಜನೆಯಡಿ ಈ ಸೌಲಭ್ಯಗಳನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲು ಪಿಡಿಒಗಳಿಗೆ ಸೂಚನೆ ನೀಡಲಾಯಿತು.
ಅಂಜನಾದ್ರಿ ಬೆಟ್ಟದ ಪ್ರದೇಶದಲ್ಲಿ ಟ್ರೀ ಗಾರ್ಡನ್ ಅಭಿವೃದ್ಧಿಗೆ ಡಿಪಿಆರ್ ಸಿದ್ಧಪಡಿಸಲು ಅರಣ್ಯ ಇಲಾಖೆಗೆ ಆದೇಶಿಸಲಾಯಿತು.
ಹಾಸ್ಟೆಲ್ಗಳು ಮತ್ತು ಅಂಗನವಾಡಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು, ಹಾಗೂ ನಗರದಲ್ಲಿ ಉಂಟಾಗಿರುವ ಟ್ರಾಫಿಕ್ ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಕೃಷಿ, ಆರೋಗ್ಯ, ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಸಮಾಜ ಕಲ್ಯಾಣ ಸೇರಿದಂತೆ ಇನ್ನೂ ಹಲವು ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಯಿತು. ಬಾಕಿ ಉಳಿದಿರುವ ಕೆಲಸಗಳನ್ನು ಗಡುವಿನೊಳಗೆ ಪೂರ್ಣಗೊಳಿಸಿ, ಸಾರ್ವಜನಿಕ ಸೇವೆಗಳ ಮಟ್ಟವನ್ನು ಸುಧಾರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಸಭೆಯಲ್ಲಿ ನಗರಸಭಾ ಅಧ್ಯಕ್ಷರಾದ ಮೌಲಸಾಬ್, ಗಂಗಾವತಿ ಕೊಪ್ಪಳ ತಹಸೀಲ್ದಾರರಾದ ವಿಠ್ಠಲ್ ಚೌಗುಲೆ, ಗಂಗಾವತಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್, ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ಹಾಗೂ ನಗರಸಭೆ ಪೌರಾಯುಕ್ತರಾದ ಆರ್. ವಿರುಪಾಕ್ಷಮೂರ್ತಿ, ಗಂಗಾವತಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಅನುಷ್ಠಾನ ಅಧಿಕಾರಿಗಳು ಹಾಗೂ ತಾ.ಪಂ ಸಹಾಯಕ ನಿರ್ದೇಶಕರು, ಯೋಜನಾಧಿಕಾರಿಗಳು, ವ್ಯವಸ್ಥಾಪಕರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಪಂ ಸಿಬ್ಬಂದಿಗಳು ಹಾಗೂ ಮಾಧ್ಯಮ ಸ್ನೇಹಿತರು ಉಪಸ್ಥಿತರಿದ್ದರು.