21/04/2026
ಕಲಬುರಗಿ ನಗರದ ಬಸವ ಸಂಸ್ಕೃತಿ ವೇದಿಕೆಯಲ್ಲಿ 893ನೇ ಬಸವ ಜಯಂತಿ ಪ್ರಯುಕ್ತ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವೀರಶೈವ ಸಮಾಜದ ಜಿಲ್ಲಾಧ್ಯಕ್ಷರು ಹಾಗೂ ನಮ್ಮೆಲ್ಲರ ನೆಚ್ಚಿನ ನಾಯಕರು ಶ್ರೀ ಅರುಣಕುಮಾರ ಎಸ್ ಪಾಟೀಲ್ ಕೊಡಲಹಂಗರಗಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಬಸವಣ್ಣರ ತತ್ವ-ಆದರ್ಶಗಳು ಇಡೀ ಪ್ರಪಂಚಕ್ಕೆ ದಾರಿ ತೋರಿಸುವಂತವು, ಪ್ರೇರಣಾದಾಯಕವಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.
ವಚನಗಳ ಮೂಲಕ ಸಮಾಜದ ಅಂತರಂಗವನ್ನು ಸ್ಪರ್ಶಿಸಿದ ಬಸವಣ್ಣರು “ಕಾಯಕವೇ ಕೈಲಾಸ” ಎಂಬ ತತ್ವದಡಿ ಬದುಕಿನ ಮೌಲ್ಯಗಳನ್ನು ಬೋಧಿಸಿದ್ದಾರೆ. ಅವರ ಚಿಂತನೆಗಳು ನಿತ್ಯ ನೂತನವಾಗಿದ್ದು, ವಿದ್ಯಾರ್ಥಿಗಳು ಹಾಗೂ ಯುವಜನತೆ ಅವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಬಸವಣ್ಣರ ಆದರ್ಶಗಳು ಎಲ್ಲರಿಗೂ ಪ್ರೇರಣೆ ಹಾಗೂ ಮಾರ್ಗದರ್ಶನವಾಗಲಿ ಎಂಬ ಆಶಯ ವ್ಯಕ್ತಪಡಿಸಿ, ಬೆಂಗಳೂರಿನ ಮೆಟ್ರೋ ನಿಲ್ದಾಣಕ್ಕೆ "ಬಸವಣ್ಣರ"ಹೆಸರಿಡಬೇಕು ಹಾಗೂ ಮಕ್ಕಳಿಗೆ ಪಾಲಕರು ಬಸವಣ್ಣರ ಚಿಂತನೆಗಳನ್ನು ಪರಿಚಯಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪರಮಪೂಜ್ಯರು, ಜನಪ್ರತಿನಿಧಿಗಳು ಹಾಗೂ ಸಮಾಜದ ಗಣ್ಯರು ಉಪಸ್ಥಿತರಿದ್ದರು.