06/03/2026
ದಿನಾಂಕ:18.02.2026ರಂದು 5ನೇ ತಂಡದ ಅಬಕಾರಿ ಉಪ ನಿರೀಕ್ಷಕರವರ ಬುನಾದಿ ತರಬೇತಿ ಮುಕ್ತಾಯಗೊಂಡ ಪ್ರಯುಕ್ತ 12 ಜನ ಪ್ರಶಿಕ್ಷಣಾರ್ಥಿಗಳಿಗೆ ನಿರ್ಗಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ನಿರ್ಮಲಾ.ಎನ್, ಅಬಕಾರಿ ಜಿಂಟಿ-ಆಯುಕ್ತರು, (ಜಾರಿ ಮತ್ತು ತನಿಖೆ) ಕಲಬುರಗಿ ವಿಭಾಗ ಹಾಗೂ ಇತರ ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಪಿಟಿಸಿಯ ಡಿಐಜಿಪಿ ಮತ್ತು ಪ್ರಾಂಶುಪಾಲರಾದ ಶ್ರೀ ಎಂ.ಪುಟ್ಟಮಾದಯ್ಯ, ಐಪಿಎಸ್ ರವರು ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ, ಉತ್ತಮ ಸಾಧನೆಗೈದ ಪ್ರಶಿಕ್ಷಣಾರ್ಥಿಗಳಿಗೆ ಪ್ರಶಸ್ತಿ ವಿತರಿಸಿದರು.