CV Chandrashekar

CV Chandrashekar For a better Society!

ಸತತ ಎರಡನೇ ಬಾರಿ ಕಪ್ ಗೆಲ್ಲುವ ಮೂಲಕ ನಮ್ಮೆಲ್ಲರ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿದ ನಮ್ಮ RCB ತಂಡಕ್ಕೆ ಹಾರ್ದಿಕ ಶುಭಾಶಯಗಳು. ನಿಮ್ಮ ಛಲ...
31/05/2026

ಸತತ ಎರಡನೇ ಬಾರಿ ಕಪ್ ಗೆಲ್ಲುವ ಮೂಲಕ ನಮ್ಮೆಲ್ಲರ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿದ ನಮ್ಮ RCB ತಂಡಕ್ಕೆ ಹಾರ್ದಿಕ ಶುಭಾಶಯಗಳು. ನಿಮ್ಮ ಛಲದ ಹೋರಾಟ ಮತ್ತು ತಂಡದ ಒಗ್ಗಟ್ಟು ನಿಜಕ್ಕೂ ಅದ್ಭುತ.

ಕೋಟ್ಯಾಂತರ ಕನ್ನಡಿಗರ ಹೆಮ್ಮೆಯಾಗಿರುವ ನೀವು, ಸತತ ಎರಡು ವರ್ಷಗಳ ಕಾಲ ಚಾಂಪಿಯನ್ ಆಗಿರುವುದು ಪ್ರತಿಯೊಬ್ಬ ಕನ್ನಡಿಗನ ಮನೆ-ಮನದ ಸಂಭ್ರಮವನ್ನು ದುಪ್ಪಟ್ಟು ಮಾಡಿದೆ. ತಂಡಕ್ಕೆ ಮತ್ತಷ್ಟು ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ. ✨🏆

ಶ್ರೀ ಹೆಚ್ ಡಿ ದೇವೇಗೌಡ, ಶ್ರೀ ಬಿ ಎಸ್ ಯಡಿಯೂರಪ್ಪ, ಶ್ರೀ ಹೆಚ್ ಡಿ ಕುಮಾರಸ್ವಾಮಿ ಹಾಗೂ ಶ್ರೀ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯ ಕಂಡ ಸಾಮಾನ್...
29/05/2026

ಶ್ರೀ ಹೆಚ್ ಡಿ ದೇವೇಗೌಡ, ಶ್ರೀ ಬಿ ಎಸ್ ಯಡಿಯೂರಪ್ಪ, ಶ್ರೀ ಹೆಚ್ ಡಿ ಕುಮಾರಸ್ವಾಮಿ ಹಾಗೂ ಶ್ರೀ ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯ ಕಂಡ ಸಾಮಾನ್ಯ ಜನತೆಯ ನಾಯಕರು. ಹೋರಾಟ, ಸಿದ್ದಾಂತ, ಛಲ ಹಾಗೂ ಕೆಚ್ಚೆದೆಯ ಮೂಲಕ ಅನೇಕ ಸವಾಲುಗಳ ನಡುವೆ ಜನಪರ ಆಡಳಿತ ನಡೆಸಿದ ಕೀರ್ತಿ ಅವರದ್ದು. ಆದ್ದರಿಂದ ಈ ನಾಯಕರು ಜನರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಾರೆ. ಇವರ ಸಭೆಗಳಿಗೆ ಸಾಗರೋಪಾದಿಯಲ್ಲಿ ಜನ ಸೇರುತ್ತಾರೆ. ತಮ್ಮ ಇರುವಿಕೆಯ ಮೂಲಕ ಗದ್ದುಗೆಗೆ ಗೌರವ ತಂದ ಇಂತಹ ಧೀಮಂತ ನಾಯಕರು ವಿದಾಯ ಗೌರವಪೂರ್ಣವಾಗಿರಬೇಕು.

ಧೀಮಂತ ನಾಯಕರಿಗೆ ಅಗೌರವ ತೋರಿಸುವ ಹಾಗೂ ಅವರನ್ನು ಅವಮಾನಿಸುವ ಸಂಸ್ಕೃತಿಯನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮೊದಲಿನಿಂದಲೂ ಬೆಳೆಸಿಕೊಂಡು ಬಂದಿದೆ. ಕಳೆದ ಎರಡು ದಶಕಗಳಿಂದ ಅಂತಹ ನಾಯಕರನ್ನು ತನ್ನ ಎಟಿಎಂ ಆಗಿ ಆ ಪಕ್ಷದ ಹೈಕಮಾಂಡ್ ಬಳಸಿಕೊಂಡಿದೆ. ಜನನಾಯಕರಿಗೆ ಗೌರವಪೂರ್ಣ ವಿದಾಯ ಕೊಡಬೇಕು ಎನ್ನುವ ಕನಿಷ್ಠ ಸೌಜನ್ಯ ಆ ಪಕ್ಷದ ಹೈಕಮಾಂಡ್ ಗೆ ಇಲ್ಲ.

ಮೂರು ದಶಕಗಳ ಹಿಂದೆ ಶ್ರೀ ವೀರೇಂದ್ರ ಪಾಟೀಲ್ ಅವರನ್ನು ಅವಮಾನಕರ ರೀತಿಯಲ್ಲಿ ಅಧಿಕಾರದಿಂದ ಕೆಳಗಿಳಿಸಿದ ಆ ಪಕ್ಷದ ಹೈಕಮಾಂಡ್ ಇಂದು ಸಿದ್ದರಾಮಯ್ಯನವರನ್ನು ಅಗೌರವಯುತವಾಗಿ ನಡೆಸಿಕೊಂಡಿದೆ.

ಸಿದ್ದರಾಮಯ್ಯನವರಿಂದ ರಾಜೀನಾಮೆ ಪಡೆದ ಕಾರಣ ಏನು ಎಂಬುದು ಈ ನಾಡಿಗೆ ಗೊತ್ತಾಗಲೇ ಬೇಕು. ಕಾಂಗ್ರೆಸ್ ಪಕ್ಷ ಆಳ್ವಿಕೆಯಲ್ಲಿ ಇರುವ ರಾಜ್ಯಗಳಲ್ಲಿ ಮುಂದುವರೆದ ಜಾತಿಯ ನಾಯಕರು ಮುಖ್ಯಮಂತ್ರಿಗಳಾಗಿದ್ದಾರೆ. ಸಿದ್ದರಾಮಯ್ಯನವರು ಮಾತ್ರ ಹಿಂದುಳಿದ ಸಮುದಾಯಕ್ಕೆ ಸೇರಿದ ನಾಯಕರು. ಹಿಂದುಳಿದ ಮತ್ತು ತಳ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದು ಆ ಸಮುದಾಯಗಳನ್ನು ಕಾಂಗ್ರೆಸ್ ಪಕ್ಷ ಅವಮಾನಿಸಿದೆ. ಅಹಿಂದ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸುವ ದಿನಗಳು ದೂರವಿಲ್ಲ.

ಸಿದ್ಧಾಂತ, ವಿಚಾರಧಾರೆ ಹಾಗೂ ಆಡಳಿತಾತ್ಮಕ ವಿಷಯಗಳಲ್ಲಿ ಸಿದ್ದರಾಮಯ್ಯನವರೊಂದಿಗೆ ಭಿನ್ನಾಭಿಪ್ರಾಯ ಇರಬಹುದು. ಆದರೆ ಅವರು ಧೀಮಂತ ನಾಯಕ ಎಂಬುದನ್ನು ಯಾರು ಅಲ್ಲಗಳಿಯುವಂತಿಲ್ಲ.

ಸಿದ್ದರಾಮಯ್ಯನವರ ರಾಜೀನಾಮೆ ಪ್ರಕರಣ ಕುರಿತು ನನ್ನ ಪತ್ರಿಕಾ ಪ್ರಕಟಣೆಯನ್ನು ಇಂದಿನ ಪ್ರಮುಖ ದಿನಪತ್ರಿಕೆಗಳು ಪ್ರಕಟಿಸಿವೆ. ಅವುಗಳನ್ನು ತಮ್ಮ ಓದಿಗಾಗಿ ಇಲ್ಲಿ ಹಂಚಿಕೊಳ್ಳಲಾಗಿದೆ.

ನಿಮ್ಮ ಸಿವಿಸಿ

ದೇವರಿಗೆ ತನ್ನ ಮೇಲಿರುವ ಅಪಾರ ಪ್ರೀತಿ ಹಾಗೂ ನಿಷ್ಠೆಯನ್ನು ಸಾಬೀತುಪಡಿಸಲು ಪ್ರವಾದಿ ಇಬ್ರಾಹಿಂ ಅವರು ತಮ್ಮ ಮಗನನ್ನೇ ಬಲಿ ಕೊಡಲು ಮುಂದಾದ ತ್ಯಾಗ...
28/05/2026

ದೇವರಿಗೆ ತನ್ನ ಮೇಲಿರುವ ಅಪಾರ ಪ್ರೀತಿ ಹಾಗೂ ನಿಷ್ಠೆಯನ್ನು ಸಾಬೀತುಪಡಿಸಲು ಪ್ರವಾದಿ ಇಬ್ರಾಹಿಂ ಅವರು ತಮ್ಮ ಮಗನನ್ನೇ ಬಲಿ ಕೊಡಲು ಮುಂದಾದ ತ್ಯಾಗದ ಸಂಕೇತವಾಗಿ ಆಚರಿಸಲಾಗುವ ಬಕ್ರೀದ್ ಹಬ್ಬದಲ್ಲಿ ಇಂದು ಪಾಲ್ಗೊಂಡೆ. ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಹಾಜರಿದ್ದು ಬಾಂಧವರಿಗೆ ಶುಭಾಶಯ ಕೋರಿದೆ. ತ್ಯಾಗ ಬಲಿದಾನಗಳ ಮೂಲಕ ಮನುಷ್ಯತ್ವದ ಹಾಗೂ ಜೀವ ಪರವಾಗಿ ಸಮಾಜವನ್ನು ಕಟ್ಟೋಣ. ಸಕಲ ಜೀವಿಗಳ ಲೇಸನ್ನು ಬಯಸಿ ಉನ್ನತಿಗಾಗಿ ಪ್ರಾರ್ಥಿಸೋಣ.

ನಿಮ್ಮ ಸಿವಿಸಿ

ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳುಪ್ರೀತಿ, ತ್ಯಾಗ, ಶಾಂತಿ ಮತ್ತು ಸೌಹಾರ್ದತೆಯ ಪ್ರತೀಕವಾದಪವಿತ್ರ ಬಕ್ರೀದ್ ಹಬ್ಬವು ನಿಮ್ಮ ಜ...
28/05/2026

ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು

ಪ್ರೀತಿ, ತ್ಯಾಗ, ಶಾಂತಿ ಮತ್ತು ಸೌಹಾರ್ದತೆಯ ಪ್ರತೀಕವಾದ
ಪವಿತ್ರ ಬಕ್ರೀದ್ ಹಬ್ಬವು ನಿಮ್ಮ ಜೀವನದಲ್ಲಿ
ಸುಖ, ಸಮೃದ್ಧಿ ಹಾಗೂ ನೆಮ್ಮದಿಯನ್ನು ತರಲಿ.

ಸಹೋದರತ್ವ ಮತ್ತು ಮಾನವೀಯತೆಯ ಮೌಲ್ಯಗಳು ಸಮಾಜದಲ್ಲಿ ಇನ್ನಷ್ಟು ಬಲವಾಗಲಿ ಎಂಬ ಹಾರೈಕೆ.

ಈದ್ ಉಲ್ ಅದ್ಹಾ ಶುಭಾಶಯಗಳು

ಸೋಮವಾರ ನಮ್ಮ ಪಕ್ಷದ ಮುಖಂಡರ ನಿಯೋಗವು ಇತ್ತೀಚೆಗೆ ಭಾರಿ ಗಾಳಿ ಹಾಗೂ ಮಳೆಯಿಂದ ಹಾನಿಗೀಡಾದ ಕೊಪ್ಪಳ ತಾಲೂಕಿನ ಹ್ಯಾಟಿ, ಮೆಳ್ಳಿಕೇರಿ ಹಾಗೂ ಮುದ್ದ...
18/05/2026

ಸೋಮವಾರ ನಮ್ಮ ಪಕ್ಷದ ಮುಖಂಡರ ನಿಯೋಗವು ಇತ್ತೀಚೆಗೆ ಭಾರಿ ಗಾಳಿ ಹಾಗೂ ಮಳೆಯಿಂದ ಹಾನಿಗೀಡಾದ ಕೊಪ್ಪಳ ತಾಲೂಕಿನ ಹ್ಯಾಟಿ, ಮೆಳ್ಳಿಕೇರಿ ಹಾಗೂ ಮುದ್ದಾಬಳ್ಳಿ ಭಾಗಗಳ ಹೊಲಗಳಿಗೆ ಭೇಟಿ ನೀಡಿತು.

ಪಕ್ಷದ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಬೆಳೆ ಹಾನಿಯನ್ನು ಪರಿಶೀಲನೆ ಮಾಡಿ, ರೈತರೊಂದಿಗೆ ಮಾತುಕತೆ ನಡೆಸಿ ಅವರಿಗೆ ಧೈರ್ಯ ತುಂಬಿದರು.

ಭಾರಿ ಮಳೆ ಹಾಗೂ ಗಾಳಿಯಿಂದ ರೈತರ ಬಾಳೆ, ಕಬ್ಬು, ಎಲೆಬಳ್ಳಿ ಸೇರಿದಂತೆ ಅನೇಕ ಬೆಳೆಗಳಿಗೆ ದೊಡ್ಡ ಪ್ರಮಾಣದ ಹಾನಿಯಾಗಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ತಕ್ಷಣವೇ ರೈತರ ನೆರವಿಗೆ ಧಾವಿಸಿ, ಹೆಚ್ಚಿನ ಪ್ರಮಾಣದ ಪರಿಹಾರ ನಿಧಿ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ಈ ಪರಿಶೀಲನಾ ನಿಯೋಗಕ್ಕೆ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಸುರೇಶ ಭೂಮರಡ್ಡಿ ಅವರು ನೇತೃತ್ವ ವಹಿಸಿದ್ದರು.

ನಿಯೋಗದಲ್ಲಿ ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶ್ರೀ ಶಿವಕುಮಾರ ಏಣಿಗಿ, ಕೊಪ್ಪಳ ತಾಲೂಕು ಜೆಡಿಎಸ್ ಎಸ್‌ಸಿ ಘಟಕದ ತಾಲೂಕು ಅಧ್ಯಕ್ಷರಾದ ಶ್ರೀ ಸುರೇಶ ಪುಜಾರಿ, ಕೊಪ್ಪಳ ಜಿಲ್ಲಾ ಕೈಗಾರಿಕಾ ಘಟಕದ ಅಧ್ಯಕ್ಷರಾದ ಶ್ರೀ ಮಾರುತಿಗೌಡ ಪೊಲೀಸ್ ಪಾಟೀಲ್, ನಗರ ಘಟಕದ ಅಧ್ಯಕ್ಷರಾದ ಶ್ರೀ ಸೋಮುನಗೌಡ ಹೊಗಾರನಾಳ, ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಶ್ರೀ ರವಿ ಮೇದರ ಹಾಗೂ ಜೆಡಿಎಸ್ ಮುಖಂಡರಾದ ಶ್ರೀ ಮಂಜುನಾಥ ರೋಡ್ಡರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹ್ಯಾಟಿ ಗ್ರಾಮದ ರೈತರಾದ ಶ್ರೀ ಈಶಪ್ಪ ಎಡ್ರಮನಹಳ್ಳಿ, ಶ್ರೀ ವೆಂಕಣ್ಣ ಡಂಬಳ್ಳಿ, ಶ್ರೀ ಕೊಟ್ರೇಶ ಸಣ್ಣಮುದಿಯಪ್ಪ, ಶ್ರೀ ವೆಂಕಣ್ಣ ಸಣ್ಣಮದ್ಯಪ್ಪ, ಶ್ರೀ ಮಲ್ಲಯ್ಯ ಗಣಚಾರಿ, ಶ್ರೀ ಬಸಣ್ಣ ಸಿಂಗನಹಳ್ಳಿ, ಶ್ರೀ ಸಂತೋಷ ಸಿಗ್ನಳ್ಳಿ ಸೇರಿದಂತೆ ಹಲವಾರು ರೈತ ಮುಖಂಡರು ಹಾಜರಿದ್ದರು.

ರೈತರ ಸಂಕಷ್ಟಕ್ಕೆ ಆಡಳಿತ ವ್ಯವಸ್ಥೆ ಸ್ಪಂದಿಸಿ ಅಗತ್ಯ ನೆರವು ಒದಗಿಸಲಿದೆ ಎಂಬ ವಿಶ್ವಾಸ ನಮ್ಮದು. ನಮ್ಮ ಪಕ್ಷ ಯಾವಾಗಲೂ ರೈತರ ಪರವಾಗಿಯೇ ನಿಲ್ಲುತ್ತದೆ.

ನಿಮ್ಮ ಸಿವಿಸಿ.

ಇಂದು ನಮ್ಮ ಪಕ್ಷ, ಕಾರ್ಯಕರ್ತರು ಹಾಗೂ ಮುಖಂಡರಿಗೆ ಹಬ್ಬದ ದಿನ. ಕಾರಣ ಇಂದು ನಮ್ಮ ಪಕ್ಷದ ರಾಷ್ಟ್ರಾಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳೂ ಆದ...
18/05/2026

ಇಂದು ನಮ್ಮ ಪಕ್ಷ, ಕಾರ್ಯಕರ್ತರು ಹಾಗೂ ಮುಖಂಡರಿಗೆ ಹಬ್ಬದ ದಿನ. ಕಾರಣ ಇಂದು ನಮ್ಮ ಪಕ್ಷದ ರಾಷ್ಟ್ರಾಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳೂ ಆದ
ಶ್ರೀ ಹೆಚ್ ಡಿ ದೇವೇಗೌಡ ಅವರ 94ನೇ ಹುಟ್ಟುಹಬ್ಬ.

ಈ ಹಿನ್ನೆಲೆಯಲ್ಲಿ ನಾನು ಇಂದು ಬೆಂಗಳೂರಿನ ಅವರ ಪದ್ಮನಾಭನಗರದ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದೆ. ಅವರಿಗೆ ಗೌರವ ಸಮರ್ಪಿಸಿ ಅವರ ಆಶೀರ್ವಾದ ಪಡೆದೆ.

ಕರುಣಾಮಯಿ ಭಗವಂತ ಅವರಿಗೆ ಹೆಚ್ಚಿನ ಆಯಸ್ಸು ಮತ್ತು ಆರೋಗ್ಯವನ್ನು ಕರುಣಿಸಲಿ. ಅವರ ಅನುಭವ,
ದೂರದೃಷ್ಟಿಯ ನಾಯಕತ್ವ ಹಾಗೂ ಸೇವೆ ಈ ದೇಶಕ್ಕೆ ನಿರಂತರವಾಗಿ ಲಭಿಸುತ್ತಿರಲಿ ಎಂದು ಪ್ರಾರ್ಥಿಸುತ್ತೇನೆ.

ನಿಮ್ಮ ಸಿವಿಸಿ

ಗೌರವಾನ್ವಿತ ಮಾಜಿ ಪ್ರಧಾನಿಗಳಾದ ಶ್ರೀ H D Devegowda  ಜೀ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮ್ಮ ಸುಧೀರ್ಘ ರಾಜಕೀಯ ಅನುಭವ ಹಾಗೂ ಹೋರ...
18/05/2026

ಗೌರವಾನ್ವಿತ ಮಾಜಿ ಪ್ರಧಾನಿಗಳಾದ ಶ್ರೀ H D Devegowda ಜೀ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮ್ಮ ಸುಧೀರ್ಘ ರಾಜಕೀಯ ಅನುಭವ ಹಾಗೂ ಹೋರಾಟಗಳು ನಾಡಿನ ಹಾಗೂ ದೇಶದ ಇತಿಹಾಸದಲ್ಲಿ ಮಹತ್ವದ ಹೆಜ್ಜೆಗುರುತುಗಳು, ವಯಸ್ಸು ಲೆಕ್ಕಿಸದ ರಾಜಕೀಯ ಕ್ರಿಯಾಶೀಲತೆ ಭವಿಷ್ಯದ ರಾಜಕಾರಣಿಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ.

ಗ್ರಾಮೀಣ ಜನರ ಬಗೆಗಿನ ನೈಜ ಕಾಳಜಿಯ ಕೊಡುಗೆಗಳು ಮಣ್ಣಿನ ಮಕ್ಕಳ ಪಾಲಿಗೆ ಚೈತನ್ಯ ತುಂಬಿದ ಸಮೃದ್ಧತೆಯ ಸಂಕೇತಗಳು. ಭಗವಂತನು ತಮಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ನಾಡು ಹಾಗೂ ದೇಶದ ಬೆಳವಣಿಗೆಗೆ ಅತ್ಯಮೂಲ್ಯ ಮಾರ್ಗದರ್ಶನ ನೀಡುತ್ತಿರುವಂತಾಗಲಿ ಎಂದು ಪ್ರಾರ್ಥಿಸುವೆ.💐

ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷರಾದ ಹೆಚ್ ಡಿ ದೇವೇಗೌಡ ಅವರ ಜನ್ಮ ದಿನಾಚರಣೆ ಹಾಗೂ ಪಕ್ಷದ ರಜತ ಮಹೋತ್ಸವದ ಅಂಗವಾಗ...
16/05/2026

ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷರಾದ ಹೆಚ್ ಡಿ ದೇವೇಗೌಡ ಅವರ ಜನ್ಮ ದಿನಾಚರಣೆ ಹಾಗೂ ಪಕ್ಷದ ರಜತ ಮಹೋತ್ಸವದ ಅಂಗವಾಗಿ ರಾಜ್ಯಮಟ್ಟದ ಜನತಾ ಪ್ರೇಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಬೆಂಗಳೂರಿನ ಮಾದಾವರದ ನೈಸ್ ಗ್ರೌಂಡ್ ನಲ್ಲಿ ಇಂದು ಆರಂಭವಾಯಿತು.

ಒಟ್ಟು 26 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿವೆ.

ಒಟ್ಟು 15 ಆಟಗಾರರನ್ನು ಒಳಗೊಂಡ ತಂಡ ಕೊಪ್ಪಳ ಜಿಲ್ಲಾ ಜೆಡಿಎಸ್ ಘಟಕವನ್ನು ಪ್ರತಿನಿಧಿಸುತ್ತಿದೆ. ಜಿಲ್ಲೆಯ ಕ್ರೀಡಾ ಘಟಕದ ಅಧ್ಯಕ್ಷರಾದ ಸೈಯದ್ ಮಹೇಮೂದ್ ಹುಸೇನಿ ಬಲ್ಲೆ ಅಂಜನಾದ್ರಿ ಫೈಟರ್ಸ್ ತಂಡದ ನಾಯಕತ್ವ ವಹಿಸಿದ್ದಾರೆ.

ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಹಾಗೂ ಯುವ ಘಟಕಗಳು ಜಂಟಿಯಾಗಿ ಪಂದ್ಯಾವಳಿಯನ್ನು ಆಯೋಜಿಸಿವೆ.

ಇಂದು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಪಂದ್ಯಗಳನ್ನು ವೀಕ್ಷಿಸಿದೆ.

ಪಕ್ಷದ ರಾಜ್ಯ ಸೋಶಿಯಲ್ ಮೀಡಿಯಾ ರಾಜ್ಯ ಅಧ್ಯಕ್ಷರಾದ ಮಾನ್ಯ ಶ್ರೀ ಚಂದನ್ ಎಸ್, ಬೆಂಗಳೂರ್ ನಗರ ಘಟಕದ ಯುವ ಅಧ್ಯಕ್ಷರಾದ ಮಾನ್ಯ ಶ್ರೀ ಪ್ರವೀಣ್ ಕುಮಾರ್ ಮತ್ತು ಕೊಪ್ಪಳ ಮೈನಾರಿಟಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಿರಾಜ್ ಅಹಮದ್ ಬಿಜಾಪುರ, ಮೈನಾರಿಟಿ ನಗರ ಘಟಕದ ಅಧ್ಯಕ್ಷರಾದ ಶ್ರೀ ಸಿರಾಜ್ ಕೋಲ್ಕಾರ್, ರಾಯಚೂರು ಜಿಲ್ಲೆಯ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ನಿಮ್ಮ ಸಿವಿಸಿ

ಮುನಿರಾಬಾದ್ ಹತ್ತಿರ ದುರಂತ ಸಂಭವಿಸಿದೆ. ಶ್ರೀ ಕ್ಷೇತ್ರ ಹುಲಿಗೆಮ್ಮನ ದರ್ಶನಕ್ಕೆ ತೆರಳುತ್ತಿರುವಾಗ ಅಪಘಾತ ಸಂಭವಿಸಿ ಆರು ಜನ ಇಹಲೋಕ ತ್ಯಜಿಸಿದ್...
15/05/2026

ಮುನಿರಾಬಾದ್ ಹತ್ತಿರ ದುರಂತ ಸಂಭವಿಸಿದೆ. ಶ್ರೀ ಕ್ಷೇತ್ರ ಹುಲಿಗೆಮ್ಮನ ದರ್ಶನಕ್ಕೆ ತೆರಳುತ್ತಿರುವಾಗ ಅಪಘಾತ ಸಂಭವಿಸಿ ಆರು ಜನ ಇಹಲೋಕ ತ್ಯಜಿಸಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ.

ತಿಂಗಳುಗಳ ಹಿಂದೆ ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರದ ದರ್ಶನಕ್ಕೆ ಬರುತ್ತಿದ್ದಾಗ ಬಸ್ ಡಿಕ್ಕಿಯಾಗಿ ಮೂರು ಭಕ್ತರು ಸಾವಿಗೀಡಾಗಿದ್ದರು. ತಿಂಗಳು ತುಂಬುವುದರೊಳಗಾಗಿ ಅದೇ ರೀತಿಯ ಅಪಘಾತ ಸಂಭವಿಸಿತ್ತು. ಈಗ ಮತ್ತೊಂದು ದುರಂತ ಸಂಭವಿಸಿದೆ.

ಶ್ರೀ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಷ್ಟ್ರೀಯ ಹೆದ್ದಾರಿ ಅತೀವ ದಟ್ಟಣೆಯಿಂದ ಕೂಡಿರುತ್ತದೆ. ಆದ್ದರಿಂದ ಸ್ಥಳೀಯ ಆಡಳಿತ ವ್ಯವಸ್ಥೆ ಮತ್ತು ರಾಜ್ಯ ಸರಕಾರ ರಸ್ತೆ ಅಗಲೀಕರಣ, ಪರ್ಯಾಯ ರಸ್ತೆ ವ್ಯವಸ್ಥೆ, ಹಾಗೂ ಸೇತುವೆಗಳನ್ನು ಕಟ್ಟುವ ಮೂಲಕ ಸುಗಮ ಸಂಚಾರದ ವ್ಯವಸ್ಥೆ ಮಾಡಬೇಕು. ಹಾಗಾದಾಗ ಮಾತ್ರ ಇಂತಹ ದುರಂತಗಳು ಕೊನೆಗೊಳ್ಳಲು ಸಾಧ್ಯ.

ಸಂಭವನೀಯ ದುರಂತಗಳ ಸ್ಥಳಗಳನ್ನು ಗುರುತಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು.

ರಸ್ತೆ ನಿಯಮ ಉಲ್ಲಂಘಿಸಿ ವೇಗವಾಗಿ ವಾಹನ ಚಲಾಯಿಸುವವರ ವಿರುದ್ಧ, ನಿಗದಿಗಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡು ಹೋಗುವ ವಾಹನಗಳ ವಿರುದ್ಧ ಮತ್ತು ಸರಕು ಸಾಗಣೆ ವಾಹನಗಳನ್ನು ಪ್ರಯಾಣಿಕರ ಪ್ರಯಾಣಕ್ಕೆ ಬಳಸುವವರ ವಿರುದ್ಧ ಸಾರಿಗೆ ಮತ್ತು ಪೊಲೀಸ್ ಇಲಾಖೆಗಳು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುತ್ತೇನೆ.

ನಿಮ್ಮ ಸಿವಿಸಿ

ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷರಾದ ಹೆಚ್ ಡಿ ದೇವೇಗೌಡ ಅವರ ಜನ್ಮ ದಿನಾಚರಣೆ ಹಾಗೂ ಪಕ್ಷದ ರಜತ ಮಹೋತ್ಸವದ ಅಂಗವಾಗ...
13/05/2026

ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷರಾದ ಹೆಚ್ ಡಿ ದೇವೇಗೌಡ ಅವರ ಜನ್ಮ ದಿನಾಚರಣೆ ಹಾಗೂ ಪಕ್ಷದ ರಜತ ಮಹೋತ್ಸವದ ಅಂಗವಾಗಿ ರಾಜ್ಯಮಟ್ಟದ ಜನತಾ ಪ್ರೇಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಬೆಂಗಳೂರಿನ ಮಾದಾವರದ ನೈಸ್ ಗ್ರೌಂಡ್ ನಲ್ಲಿ ಇದೇ 15, 16 ಹಾಗೂ17ರಂದು ಆಯೋಜಿಸಲಾಗಿದೆ. ಒಟ್ಟು 26 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿವೆ.

ಒಟ್ಟು 15 ಆಟಗಾರರನ್ನು ಒಳಗೊಂಡ ತಂಡ ಕೊಪ್ಪಳ ಜಿಲ್ಲಾ ಜೆಡಿಎಸ್ ಘಟಕವನ್ನು ಪ್ರತಿನಿಧಿಸುತ್ತಿದೆ. ಜಿಲ್ಲೆಯ ಕ್ರೀಡಾ ಘಟಕದ ಅಧ್ಯಕ್ಷರಾದ ಸೈಯದ್ ಮಹೇಮೂದ್ ಹುಸೇನಿ ಬಲ್ಲೆ ಅಂಜನಾದ್ರಿ ಫೈಟರ್ಸ್ ತಂಡದ ನಾಯಕತ್ವ ವಹಿಸಲಿದ್ದಾರೆ. ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಹಾಗೂ ಯುವ ಘಟಕಗಳು ಜಂಟಿಯಾಗಿ ಪಂದ್ಯಾವಳಿಯನ್ನು ಆಯೋಜಿಸಿವೆ. ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಬುಧವಾರ ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಕೊಪ್ಪಳ ಜಿಲ್ಲೆಯ ಜೆಡಿಎಸ್ ತಂಡ 'ಅಂಜನಾದ್ರಿ ಫೈಟರ್ಸ್' ಜರ್ಸಿ ಅನಾವರಣ ಕಾರ್ಯಕ್ರಮ ಜರುಗಿತು.

ಪಂದ್ಯಾವಳಿಯಲ್ಲಿ ಗೆದ್ದು ಕೊಪ್ಪಳದ ಅಂಜನಾದ್ರಿ ಫೈಟರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿ ಎಂದು ಹಾರೈಸಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಸುರೇಶ್ ಭೂಮರಡ್ಡಿ, ಜಿಲ್ಲಾ ಅಲ್ಪಸಂಖ್ಯಾತ ಅಧ್ಯಕ್ಷ ಸಿರಾಜ್ ಅಹಮದ್, ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ನಗರ ಘಟಕ ಅಲ್ಪಸಂಖ್ಯಾತ ಅಧ್ಯಕ್ಷ ಸಿರಾಜ್ ಕೋಲ್ಕಾರ್, ತಾಲೂಕು ಎಸ್ ಸಿ ಘಟಕದ ಅಧ್ಯಕ್ಷ ಸುರೇಶ ದದೇಗಲ್, ತಾಲೂಕು ಎಸ್ ಟಿ ಘಟಕದ ಅಧ್ಯಕ್ಷ ಮಲ್ಲಪ್ಪ ಹಂದ್ರಾಳ, ಜಿಲ್ಲಾ ಖಜಾಂಚಿ ಮೌನೇಶ್ ಕಿನ್ನಾಳ, ದ್ಯಾಮಣ್ಣ ಕಲಕೇರಿ, ಮುತ್ತಣ್ಣ ಕಲಕೇರಿ, ರೋಹಿತ್ ಹಣವಾಳ, ಕಲಿಲ್ ಮಾನ್ವಿ ಹಾಗೂ ಇತರರು ಉಪಸ್ಥಿತರಿದ್ದರು.

ಅಂಜನಾದ್ರಿ ಫೈಟರ್ಸ್ ತಂಡದ ಆಟಗಾರರು: ಸೈಯದ್ ಮಹೇಮೂದ್ ಹುಸೇನಿ ಬಲ್ಲೆ ( ನಾಯಕ), ಸುರೇಶ್ ಚೌಹಾಣ್, ಮಹೇಶ್ ಲಮಾಣಿ, ಸೋಮನಗೌಡ ಬಿ ಎಚ್, ಪ್ರಹ್ಲಾದ್ ಕೆ, ವಿಷ್ಣು ಆರ್ ಸದ್ದಾಂ ಹುಸೇನ್, ಕಾಳಜ್ಜ ಸಾಗರ್, ಸಾಧಿಕ್, ಯುವರಾಜ್ ಸೈಯದ್ ಶಂಸುದ್ದೀನ್, ಖಲೀಲ್ ಮಾನ್ವಿ, ಹುಸೇನಿ ಹಾಗೂ ಉಮರ್ ಫಾರೂಕ್.

ನಿಮ್ಮ ಸಿವಿಸಿ

Address

Cvc Farm House Next To Padkhi Township Kustagi Road Koppal
Koppal
583231

Website

Alerts

Be the first to know and let us send you an email when CV Chandrashekar posts news and promotions. Your email address will not be used for any other purpose, and you can unsubscribe at any time.

Contact The Organization

Send a message to CV Chandrashekar:

Share

Category