04/06/2026
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಯುವ ಯುಗ ನಿರ್ಮಾಣಕ್ಕೆ ಮುಂದಾಗಿದೆ.
ರಾಜ್ಯದ ಯುವಕರಿಗೆ ಉತ್ತೇಜನ ನೀಡಿ ಅವರ ಭವಿಷ್ಯ ರೂಪಿಸಲು ಹಾಗೂ ಜನಸಾಮಾನ್ಯರ ಸಂಕಷ್ಟಗಳಿಗೆ ಪರಿಹಾರ ನೀಡಲು ಶ್ರೀ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೊದಲ ಸಚಿವ ಸಂಪುಟದಲ್ಲೇ ಆರು ಪ್ರಮುಖ ತೀರ್ಮಾನ ಮಾಡಿದೆ.
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಯುವ ಉದ್ಯೋಗ ಸೇತು ಮೂಲಕ ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆ ಜಾರಿ, 10 ಸಾವಿರ ಭಾರತ ಜೋಡೋ ಯುವಕರ ಸಂಘ ಸ್ಥಾಪನೆ ಹಾಗೂ 10 ಲಕ್ಷ ಅನುದಾನ, ಜನ ಸಾಮಾನ್ಯರನ್ನು ಕಾಡುತ್ತಿದ್ದ ಒಸಿ- ಸಿಸಿ ಸಮಸ್ಯೆಗೆ ಪರಿಹಾರ, ರಾಜ್ಯದೆಲ್ಲೆಡೆ ಬಿ ಖಾತಾಯಿಂದ ಎ ಖಾತಾ ಪರಿವರ್ತನೆ ಹಾಗೂ ಬೆಂಗಳೂರು ನಗರದ ರಸ್ತೆಗಳ ಡಾಂಬರೀಕರಣಕ್ಕೆ 2 ಸಾವಿರ ಕೋಟಿ ಅನುದಾನಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಮೂಲಕ ಕರ್ನಾಟ ರಾಜ್ಯದ ಪ್ರಗತಿಗೆ ಮುನ್ನುಡಿ ಬರೆಯಲಾಗಿದೆ.