Mysore Voice ಮೈಸೂರಿನ ಧ್ವನಿ

Mysore Voice ಮೈಸೂರಿನ ಧ್ವನಿ ಮೈಸೂರಿನ ಸುತ್ತಲಿನ ಚಳುವಳಿಗಳನ್ನು ಬಿತ್ತರಿಸುವ ಮಾಧ್ಯಮ

ಮೈಸೂರಿನ ಕೆ.ಆರ್.ನಗರದಲ್ಲಿ ಗುರುತಿಸಲಾಗಿರುವ 3 ಕೆಪಿಎಸ್ ಶಾಲೆಗಳಿಗೆ( ಕೆಸ್ತೂರು ಕೊಪ್ಪಲು,ಗಂಧನಹಳ್ಳಿ,ಹಂಪಾಪುರ) 34 ಶಾಲೆಗಳನ್ನು ವಿಲೀನಗೊಳಿಸ...
05/06/2026

ಮೈಸೂರಿನ ಕೆ.ಆರ್.ನಗರದಲ್ಲಿ ಗುರುತಿಸಲಾಗಿರುವ 3 ಕೆಪಿಎಸ್ ಶಾಲೆಗಳಿಗೆ( ಕೆಸ್ತೂರು ಕೊಪ್ಪಲು,ಗಂಧನಹಳ್ಳಿ,ಹಂಪಾಪುರ) 34 ಶಾಲೆಗಳನ್ನು ವಿಲೀನಗೊಳಿಸುತ್ತಿರುವುದರ ಸರ್ಕಾರದ ಕ್ರಮದ ವಿರುದ್ಧ ಇಂದು ವಿವಿಧ ಗ್ರಾಮಗಳ ಪೋಷಕರು ಮತ್ತು ಗ್ರಾಮಸ್ಥರು AIDSO ನೇತೃತ್ವದಲ್ಲಿ ಬಿಇಓ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಆಡಳಿತ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಮೈಸೂರಿನ ಟಿ.ನರಸೀಪುರದಲ್ಲಿ ಗುರುತಿಸಲಾಗಿರುವ ನಾಲ್ಕು ಕೆಪಿಎಸ್ ಶಾಲೆಗಳಿಗೆ(ಯಡದೊರೆ,ಮುಸುವಿನಕೊಪ್ಪಲು,ಬನ್ನೂರು,ವ್ಯಾಸರಾಜಪುರ) 45 ರಿಂದ 50 ಶಾ...
05/06/2026

ಮೈಸೂರಿನ ಟಿ.ನರಸೀಪುರದಲ್ಲಿ ಗುರುತಿಸಲಾಗಿರುವ ನಾಲ್ಕು ಕೆಪಿಎಸ್ ಶಾಲೆಗಳಿಗೆ(ಯಡದೊರೆ,ಮುಸುವಿನಕೊಪ್ಪಲು,ಬನ್ನೂರು,ವ್ಯಾಸರಾಜಪುರ) 45 ರಿಂದ 50 ಶಾಲೆಗಳನ್ನು ವಿಲೀನಗೊಳಿಸುತ್ತಿರುವುದರ ಸರ್ಕಾರದ ಕ್ರಮದ ವಿರುದ್ಧ ಇಂದು ವಿವಿಧ ಗ್ರಾಮಗಳ ಪೋಷಕರು ಮತ್ತು ಗ್ರಾಮಸ್ಥರು AIDSO ನೇತೃತ್ವದಲ್ಲಿ ಬಿಇಓ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಆಡಳಿತ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

04/06/2026
ಹಲವು ವರ್ಷಗಳ ವಿದ್ಯಾರ್ಥಿ ಹೋರಾಟಕ್ಕೆ ಸಂದ ಜಯ!'ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್' ಎಂಬ ಮುಖ್ಯಮಂತ್ರಿಗಳ ಘೋಷಣೆಯನ್ನು ಎ.ಐ.ಡಿ.ಎಸ್.ಓ ...
04/06/2026

ಹಲವು ವರ್ಷಗಳ ವಿದ್ಯಾರ್ಥಿ ಹೋರಾಟಕ್ಕೆ ಸಂದ ಜಯ!

'ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್' ಎಂಬ ಮುಖ್ಯಮಂತ್ರಿಗಳ ಘೋಷಣೆಯನ್ನು ಎ.ಐ.ಡಿ.ಎಸ್.ಓ ವಿದ್ಯಾರ್ಥಿ ಸಂಘಟನೆ‌ಯು ಸ್ವಾಗತಿಸುತ್ತದೆ.

ಈ ಯೋಜನೆಯು ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಜಾರಿಗೆ ಬರಲಿ ಎಂದು ಆಶಿಸುತ್ತೇವೆ.

ಹುಣಸೂರು ತಾಲೂಕಿನ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸದಂತೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗೆ (ಬಿಓಗೆ) ಗ್ರಾಮಸ್ಥರ ಆಗ್ರಹ.*ಕೆಪಿಎಸ್ - ಮ್ಯಾ...
03/06/2026

ಹುಣಸೂರು ತಾಲೂಕಿನ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸದಂತೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗೆ (ಬಿಓಗೆ) ಗ್ರಾಮಸ್ಥರ ಆಗ್ರಹ.

*ಕೆಪಿಎಸ್ - ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸಿ ಹಾಗೂ ಗುರುಪುರ ಮತ್ತು ಕಟ್ಟೆಮಳಲವಾಡಿ ಕೆಪಿಎಸ್ ಶಾಲೆಗಳಿಗೆ ಸುತ್ತಮುತ್ತಲಿನ ಶಾಲೆಗಳನ್ನು ವಿಲೀನಗೊಳಿಸಿದಂತೆ ಆಗ್ರಹಿಸಿ, ಹುಣಸೂರು ತಾಲೂಕಿನ ವಿವಿಧ ಗ್ರಾಮಗಳ ಗ್ರಾಮಸ್ಥರು ಎಐಡಿಎಸ್ಓ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ಹುಣಸೂರು ತಾಲೂಕು ಬಿಇಓ ಕಚೇರಿ ಮುಂಭಾಗ ಪ್ರತಿಭಟನೆ ಮಾಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (BEO) ಮನವಿ ಪತ್ರ ಸಲ್ಲಿಸಿದರು*.

*ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷರಾದ ಸ್ವಾತಿ* ಅವರು ಮಾತನಾಡಿ ' ಸರ್ಕಾರ ತನ್ನ ಮೂಲ ಕರ್ತವ್ಯ ಮರೆತು ಜನಸಾಮಾನ್ಯರನ್ನು ಕತ್ತಲೆಗೆ ತಳ್ಳುವ ಹೀನ ಕೆಲಸಕ್ಕೆ ಕೈಹಾಕಿದೆ. ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಇಷ್ಟೊಂದು ದಾಖಲಾತಿ ಮಾಡಿಸಿದ್ದೇವೆ ಎಂದು ಅಂಕಿ-ಅಂಶಗಳನ್ನು ಪ್ರದರ್ಶಿಸಿ ಜಾರಿಕೊಳ್ಳಲು ಶಿಕ್ಷಕರು ಮತ್ತು ಪೋಷಕರ ಮೇಲೆ ಒತ್ತಡ ಹೇರುತ್ತಿದೆ' ಎಂದು ದೂರಿದರು. ಸರ್ಕಾರಿ ಶಾಲೆಗಳು ಮಕ್ಕಳ ಜ್ಞಾನದ ಮಂದಿರವಾಗಿದೆ. ಹುಣಸೂರಿನಲ್ಲಿ ಗುರುಪುರ ಹಾಗೂ ಕಟ್ಟೆಮಳಲವಾಡಿ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆ ಮಾಡುವುದಾಗಿ ಡಿಡಿಪಿಐ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಈ ಸುತ್ತಲಿನ ಶಾಲೆಗಳನ್ನು ಮುಚ್ಚಬಾರದೆಂದು ಆಗ್ರಹಿಸಿದರು.

ಈಗಾಗಲೇ ಟಿ .ನರಸೀಪುರ ತಾಲೂಕಿನ ಯಡದೊರೆ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಸುತ್ತಲಿನ ಹಳ್ಳಿಗಳ ಶಾಲೆಯ ಮಕ್ಕಳನ್ನು ಸೇರಿಸಲು ಶಿಕ್ಷಕರು ಗ್ರಾಮಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ.ಕಳೆದ ವರ್ಷ ಪೈಲೆಟ್ ಪ್ರಾಜೆಕ್ಟ್ ಕೆಪಿಎಸ್ ಮ್ಯಾಗ್ನೆಟ್ ಹೊಂಗನೂರಿಗೆ ಸುತ್ತಮುತ್ತಲಿನ 7 ಹಳ್ಳಿಗಳ ಶಾಲೆಗಳನ್ನು ಶೈಕ್ಷಣಿಕ ವರ್ಷದ ಮಧ್ಯದಲ್ಲಿ ವಿಲೀನಗೊಳಿಸಲು ಆದೇಶಿಸಿತ್ತು. ಹಾಗೆಯೇ, ಈಗ ಅರಸೀಕೆರೆ ತಾಲೂಕಿನಲ್ಲಿ 5 ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಆರಂಭಿಸಿ, ಸುತ್ತಮುತ್ತಲಿನ 50ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು ಸರ್ಕಾರ ವಾರದ ಹಿಂದೆಯೇ ಆದೇಶ ಹೊರಡಿಸಿದೆ. ಈ ಬೆಳವಣಿಗೆಗಳು ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಜಾರಿಗೆ ಸಾಕ್ಷಿಯಾಗಿದ್ದು,
ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಿಗೆ ಹಿಂಬಾಗಿಲಿಂದ ಶಾಲೆಗಳನ್ನು ಮುಚ್ಚುವ ಕುತಂತ್ರ ಮಾಡಬಹುದು. ಹಾಗಾಗಿ ಪೋಷಕರು ಗ್ರಾಮಸ್ಥರು ಎಚ್ಚರಿಕೆಯಿಂದ ತಮ್ಮ ಊರಿನ ಸರ್ಕಾರಿ ಶಾಲೆಯನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಗುಣಮಟ್ಟದ ಶಿಕ್ಷಣವನ್ನು ಕೆಪಿಎಸ್ ಶಾಲೆಯಲ್ಲಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಈಗಾಗಲೇ ಇರುವ ಹಲವಾರು ಕೆಪಿಎಸ್ ಶಾಲೆಗಳು ಮೂಲಭೂತ ಸೌಲಭ್ಯಗಳಿಲ್ಲದೆ ಸೊರಗುತ್ತಿವೆ . ಹಾಗಾಗಿ ಈಗಿರುವ ಹಳ್ಳಿಗಳ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಬಲಪಡಿಸಿ ಎಂದು ಆಗ್ರಹಿಸಿದರು.

*ಕರ್ನಾಟಕ ರಾಜ್ಯ ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷರಾದ* ಹೊಸೂರು ಕುಮಾರ್ ಅವರು ಮಾತನಾಡಿ, ಗ್ರಾಮೀಣ ಭಾಗದ ಶಾಲೆಗಳನ್ನು ರಕ್ಷಿಸಿಕೊಳ್ಳುವುದು ನಮ್ಮ ಜವಾಬ್ದಾರಿ. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹಿಂಪಡೆಯುವವರೆಗೆ ನಮ್ಮ ಹೋರಾಟ ನಿಲ್ಲಬಾರದು. ಸರ್ಕಾರ ಎಚ್ಚೆತ್ತುಕೊಂಡು ಈ ಕೂಡಲೇ ನೀತಿಯನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ದೊಡ್ಡ ಹೋರಾಟವನ್ನು ಸರ್ಕಾರ ಎದುರಿಸಬೇಕಾಗುತ್ತದೆ ಎಂದರು.

*ದಲಿತ ಸಂಘರ್ಷ ಸಮಿತಿ ಮುಖಂಡರಾದ ರಾಜಣ್ಣ* ಅವರು ಮಾತನಾಡಿ, ಹಲವಾರು ಸರ್ಕಾರಿ ಅಧಿಕಾರಿಗಳು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದುಕೊಂಡಿದ್ದಾರೆ. ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಬಲಪಡಿಸಬೇಕು. ಈಗಾಗಲೇ ವಿದ್ಯುತ್, ಬಂದರು, ರೈಲ್ವೆ ಹಾಗೂ ನೀರನ್ನು ಖಾಸಗಿ ಅವರಿಗೆ ಮಾರಿದ್ದೀರಿ. ಇವಾಗ ಸರ್ಕಾರಿ ಶಾಲೆಗಳನ್ನು ಕೂಡ ಖಾಸಗಿ ಅವರಿಗೆ ಮಾರಲು ನಿಂತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನಂತರ ಹುಣಸೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕಾಳಸ್ವಾಮಿ ಅವರಿಗೆ ಮನವಿ ಪತ್ರ ನೀಡಲಾಯಿತು.ಮನವಿ ಸ್ವೀಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸುನಿಲ್, ಕರ್ನಾಟಕ ರಾಜ್ಯ ರೈತ ಸಂಘಟನೆಯ ಸದಸ್ಯರು ಹಾಗೂ ಕೊಡಗು ಹೊಸೂರು ಕಾಲೋನಿಯ ಮಂಜೇಗೌಡರು, ರಾಜೇಗೌಡರು, ಉಮ್ಮತ್ತೂರಿನ ರವಿ, ಭಾಸ್ಕರ್. ಅಂಬೇಡ್ಕರ್ ನಗರದ ಜೀವನ್, ಕಿರಿಜಾಜಿಯ ಧನಂಜಯ್ ,ಮಹದೇವ್, ಅಗ್ರಹಾರ ರಾಮೇಗೌಡ, ಹರೀಶ್ ಹಾಗೂ ಕಟ್ಟೆಮಳಲವಾಡಿ ಕೊಪ್ಪಲಿನ ದೇವರಾಜು ಉಜಿನಿಗೌಡ ಒಳಗೊಂಡಂತೆ ವಿವಿಧ ಗ್ರಾಮಗಳಿಂದ 50ಕ್ಕೂ ಹೆಚ್ಚು ಪೋಷಕರು, ಗ್ರಾಮಸ್ಥರು ನೆರೆದಿದ್ದರು.

01/06/2026


01/06/2026

& ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ 100 ವರ್ಷ ಇತಿಹಾಸ ಇರುವ ಮೈಸೂರು ಜಿಲ್ಲೆಯ ಕೆ ಆರ್ ನಗರ ತಾಲೂಕಿನ ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಆಗ್ರಹಿಸಿ ಗ್ರಾಮಸ್ಥರು ಹಾಗೂ ಪೋಷಕರಿಂದ ಪ್ರತಿಭಟನೆ* Madhu Bangarappa
#ನಮ್ಮೂರ_ಶಾಲೆ_ಉಳಿಸಿ

ಮೈಸೂರಿನ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಮತ್ತು ಗುರುಪುರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನ ಮಾಡುತ್ತಿರುವುದನ್ನು ವಿರೋಧಿಸಿ ಸರಗೂರು ಕಟ್...
31/05/2026

ಮೈಸೂರಿನ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಮತ್ತು ಗುರುಪುರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನ ಮಾಡುತ್ತಿರುವುದನ್ನು ವಿರೋಧಿಸಿ ಸರಗೂರು ಕಟ್ಟೆಮಳಲವಾಡಿ ಕೊಪ್ಪಲು
ಕಿರಿಜಾಜಿ,ಅಗ್ರಹಾರ,ಹೊಸೂರು,ಉಮ್ಮತ್ತೂರು,
ಅಂಬೇಡ್ಕರ್ ನಗರ ಗ್ರಾಮದ ಗ್ರಾಮಸ್ಥರು AIDSO ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು...!!


ಮೈಸೂರಿನ ಕೆ.ಆರ್ ನಗರ  ತಾಲೂಕಿನ ಹಂಪಾಪುರ  ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನ ಮಾಡುತ್ತಿರುವುದನ್ನು ವಿರೋಧಿಸಿ ಸಿದ್ದಾಪುರ,D.K.ಕೊಪ್ಪಲು,ಚಂ...
31/05/2026

ಮೈಸೂರಿನ ಕೆ.ಆರ್ ನಗರ ತಾಲೂಕಿನ ಹಂಪಾಪುರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನ ಮಾಡುತ್ತಿರುವುದನ್ನು ವಿರೋಧಿಸಿ ಸಿದ್ದಾಪುರ,D.K.ಕೊಪ್ಪಲು,ಚಂದಗಾಲು,ಮಂಚನಹಳ್ಳಿ,ಬಡಕನ ಕೊಪ್ಪಲು,ದೊಡ್ಡಕೊಪ್ಪಲು, ಗ್ರಾಮದ ಗ್ರಾಮಸ್ಥರು AIDSO ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು...!!


ಮೈಸೂರಿನ ಟಿ. ನರಸೀಪುರ ತಾಲೂಕಿನ ಯಡದೊರೆ  ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನ ಮಾಡುತ್ತಿರುವುದನ್ನು ವಿರೋಧಿಸಿ ಮುತ್ತತ್ತಿ,ಆರ್.ಪಿ.ಹುಂಡಿ,ರಾ...
28/05/2026

ಮೈಸೂರಿನ ಟಿ. ನರಸೀಪುರ ತಾಲೂಕಿನ ಯಡದೊರೆ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನ ಮಾಡುತ್ತಿರುವುದನ್ನು ವಿರೋಧಿಸಿ ಮುತ್ತತ್ತಿ,ಆರ್.ಪಿ.ಹುಂಡಿ,ರಾಯರಹುಂಡಿ,ಇಂಡುವಾಳು ಗ್ರಾಮದ ಗ್ರಾಮಸ್ಥರು AIDSO ನೇತೃತ್ವದಲ್ಲಿ ಪ್ರತಿಭಟನೆ ಮಾಡಿದರು...!!


Address

Mysore
570001

Website

Alerts

Be the first to know and let us send you an email when Mysore Voice ಮೈಸೂರಿನ ಧ್ವನಿ posts news and promotions. Your email address will not be used for any other purpose, and you can unsubscribe at any time.

Contact The Organization

Send a message to Mysore Voice ಮೈಸೂರಿನ ಧ್ವನಿ:

Share

Category