ಪಿರಿಯಾಪಟ್ಟಣ ಕಾಂಗ್ರೆಸ್

ಪಿರಿಯಾಪಟ್ಟಣ ಕಾಂಗ್ರೆಸ್ ಪಿರಿಯಾಪಟ್ಟಣ ಕಾಂಗ್ರೇಸ್ ಪಕ್ಷದ ಅಧಿಕೃತ ಪೇಜ್

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಟಿ.ನರಸೀಪುರ ತಾಲ್ಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಿದ್ದ, "ವರುಣಾ ವಿಧಾನಸಭಾ ಕ್ಷೇತ್...
18/01/2026

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಟಿ.ನರಸೀಪುರ ತಾಲ್ಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಿದ್ದ, "ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ Siddaramaiah ಅವರು ನೆರವೇರಿಸಿದರು.

ಸಚಿವರಾದ ಡಾ||ಹೆಚ್.ಸಿ.ಮಹದೇವಪ್ಪ, ಡಾ||ಶರಣಪ್ರಕಾಶ್ ಪಾಟೀಲ್, ಡಾ||ಎಂ.ಸಿ.ಸುಧಾಕರ್, ಸಂಸದರಾದ ಸುನಿಲ್ ಬೋಸ್, ವಿಧಾನ‌ ಪರಿಷತ್ ಸದಸ್ಯರಾದ ಡಾ||ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು, ವಿಧಾನ‌ ಪರಿಷತ್ ಸದಸ್ಯರುಗಳು, ವರುಣಾ ವಿಧಾನಸಭಾ ಕ್ಷೇತ್ರದ ಮುಖಂಡರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನ: ಸ್ಥಾಪನೆಯಾಗುವವರೆಗೆ ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲಿಸಬೇಕು.2005 ರಲ್ಲಿ ಮನಮೋಹನ್ ಸಿಂಗ್ ಅ...
18/01/2026

ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನ: ಸ್ಥಾಪನೆಯಾಗುವವರೆಗೆ ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲಿಸಬೇಕು.
2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಮನರೇಗಾ ಕಾನೂನು ಜಾರಿ ಮಾಡಿದರು. ಆ ಮೂಲಕ ಕೆಲಸದ ಹಕ್ಕು ಕೊಟ್ಟರು. ಮೋದಿ ಸರ್ಕಾರ ಅದನ್ನು ಕಿತ್ತುಹಾಕುತ್ತಿದೆ. ಬಿಜೆಪಿಯವರು ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ ಕೆಲಸ ಕೊಡಲು ಬಿಡುತ್ತಿಲ್ಲ. ನೀವು ಯಾವಾಗ ಕೇಳಿದರೂ ಉದ್ಯೋಗ ಕೊಡುವ ಕಾಯಿದೆಯನ್ನು ಜಾರಿ ಮಾಡಲಾಗಿತ್ತು. ಈಗ ಕೇಂದ್ರ ಸರ್ಕಾರ ಅದನ್ನು ತೀರ್ಮಾನಿಸಲಿದೆ. ವಿಬಿ ಗ್ರಾಮ್ ಜಿ ರದ್ದಾಗಬೇಕು. ಜನರನ್ನು ತಪ್ಪು ದಾರಿ ಎಳೆಯಲು ರಾಮ್ ಜಿ ಸೇರಿಸಿದ್ದಾರೆ. ಎಲ್ಲರೂ ಚಳುವಳಿಗೆ ತಯಾರಾಗಿ.

ದೇಶದಲ್ಲಿ ಇನ್ನು ಮುಂದೆ ಮನರೇಗಾ ಯೋಜನೆ ಇರುವುದಿಲ್ಲ. ನಮ್ಮ ಸರ್ಕಾರ ಮನರೇಗಾ ಯೋಜನೆಯನ್ನು ಮುಂದುವರೆಸಲು ಹೋರಾಡುತ್ತಿದೆ. ದಲಿತರಿಗೆ, ಹೆಣ್ಣುಮಕ್ಕಳಿಗೆ ಕೆಲಸ ಕೊಡುವ ಕಾಯ್ದೆ. ಅದು ಸಂವಿಧಾನದ ಹಕ್ಕು. ಮನರೇಗಾವನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದೆಂಬ ಒತ್ತಡವನ್ನು
ಹಾಕಲಾಗುತ್ತಿದೆ.

ಕುಪ್ಯಾ ಗ್ರಾಮದಲ್ಲಿ ಸುಮಾರು 323 ಕೋಟಿ ರೂ.ಗಳ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ನಂತರ ಮೂರು ಬಾರಿ ವರುಣಾ ಕ್ಷೇತ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 22/10/2024 ರಲ್ಲಿ 501 ಕೋಟಿ ರೂ‌. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ನಂತರ 9/8/2025 ರಂದು 1,108 ಕೋಟಿ ರೂ. ಗಳ ಕಾರ್ಯಕ್ರಮಗಳು ಮತ್ತು ಇಂದು ₹323 ಕೋಟಿ ಸೇರಿದಂತೆ ಒಟ್ಟು 1,932 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ವರುಣಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ. 1,500ಕ್ಕೂ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಜಾರಿ ಮಾಡಲಾಗಿದೆ. ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳು ಎರಡಕ್ಕೂ ಸಮಾನವಾಗಿ ವೆಚ್ಚ ಮಾಡಲಾಗಿದೆ.

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ ವರುಣಾದಲ್ಲಿ ₹1,932 ಕೋಟಿಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ. ಖಜಾನೆ ಖಾಲಿಯಾಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಮೈಸೂರು ಜಿಲ್ಲೆಯಲ್ಲಿ ಸುಮಾರು 10,000 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಇದೇ ರೀತಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಅಭಿವೃದ್ಧಿಗಾಗಿ ಸರ್ಕಾರ ಕ್ರಮ ಕೈಗೊಂಡಿದೆ. 1,15,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳಬೇಕು.

ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರುಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ. ಯತೀಂದ್ರ. ಅವರಿಗೆ ಕ್ಷೇತ್ರದ ಎಲ್ಲಾ ಗ್ರಾಮಗಳ ಪರಿಚಯವಿದೆ. ವಾರಕ್ಕೆ ಎರಡು ಮೂರು ಸಾರಿ ಬಂದು ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಮೈಸೂರಿಗೆ ಬಂದಾಗಲೆಲ್ಲಾ ಜನರನ್ನು ಭೇಟಿ ಮಾಡುವ ಪ್ರಯತ್ನ ಮಾಡುತ್ತೇನೆ.

- ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಿದ್ದ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭದಲ್ಲಿ ಮುಖ್ಯಮಂತ್ರಿ Siddaramaiah ಅವರ ಮಾತುಗಳು

ಮೈಸೂರಿನ ಶ್ರೀ ಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ...
18/01/2026

ಮೈಸೂರಿನ ಶ್ರೀ ಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಕೃಷಿ ವಿಚಾರಸಂಕಿರಣದ ಉದ್ಘಾಟನೆಯನ್ನು ಮುಖ್ಯಮಂತ್ರಿ Siddaramaiah ಅವರು ನೆರವೇರಿಸಿ, ಶುಭ ಹಾರೈಸಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಇಂದಿನ ಸಮಾ...
10/07/2024

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಇಂದಿನ ಸಮಾರಂಭದಲ್ಲಿ ಕೃತಜ್ಞತೆ ಸಲ್ಲಿಸಿ, ಮಾತನಾಡಿದೆ.

ನನ್ನ ಮತ್ತು ಚಾಮರಾಜನಗರದ ಜನರ ಸಂಬಂಧ 40 ವರ್ಷಗಳಷ್ಟು ಹಳೆಯದು ಮತ್ತು ಗಟ್ಟಿಯದ್ದು. ಇಲ್ಲಿನ ಜನರ ಪ್ರೀತಿ - ಅಭಿಮಾನಕ್ಕೆ ನಾನು ಚಿರ‌ಋಣಿ.

ನೆಹರೂ ಅವಧಿಯಿಂದ ಇವತ್ತಿನವರೆಗೆ ಕಾಂಗ್ರೆಸ್ ನಿರಂತರವಾಗಿ ಸಮಾಜದ ಸಮಗ್ರ ಅಭಿವೃದ್ಧಿಗೆ, ಸರ್ವ ಜನರ ಪ್ರಗತಿ ಮತ್ತು ಸಾಮರಸ್ಯಕ್ಕಾಗಿ ಶ್ರಮಿಸುತ್ತಿದೆ, ಕಾರ್ಯಕ್ರಮಗಳನ್ನು ರೂಪಿಸುತ್ತಿದೆ.
ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ದಲಿತರು, ಮಹಿಳೆಯರು, ಹಿಂದುಳಿದವರು, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಕೊಡಬೇಕು ಎನ್ನುವುದು ನನ್ನ ಗುರಿಯಾಗಿದೆ. ಇದೇ ಕಾಂಗ್ರೆಸ್ ಪಕ್ಷದ ಆಧ್ಯತೆಯೂ ಆಗಿದೆ.

ಈ ದೇಶದ ಸ್ವಾತಂತ್ರ್ಯಕ್ಕಾಗಿ ಅತಿ ಹೆಚ್ಚು ಪ್ರಾಣ, ಆಸ್ತಿ, ಪಾಸ್ತಿ ಕಳೆದುಕೊಂಡವರು ನಾವು ಕಾಂಗ್ರೆಸ್ಸಿಗರು. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಮಹಾತ್ಮಗಾಂಧಿ ಕರೆ ಕೊಟ್ಟಾಗ ಜನಸಂಘ (ಬಿಜೆಪಿಯವರು) ಬ್ರಿಟಿಷರ ಜೊತೆ ಕೈಜೋಡಿಸಿದರೆ ಉಳಿದ ಭಾರತೀಯರೆಲ್ಲರೂ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು.

ಸರ್ವ ಜಾತಿ, ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ ಮನೆಗೆ ತಲುಪಿಸಿದ್ದೇವೆ. ಆದರೂ ಬಿಜೆಪಿಯವರು ನಿರಂತರ ಸುಳ್ಳುಗಳನ್ನು ಹುಟ್ಟುಹಾಕುತ್ತಾ, ಗ್ಯಾರಂಟಿಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.

ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ.
ನಾವು ನುಡಿದಂತೆ ನಡೆಯದಿದ್ದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ 80 ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ. ಬಿಜೆಪಿಯವರು ದೇಶದ ಮತದಾರರನ್ನು ದಡ್ಡರು ಎಂದು ಬಿಂಬಿಸುತ್ತಿದ್ದಾರೆ. ಆದರೆ ನಮ್ಮ ಮತದಾರರು ದಡ್ಡರಲ್ಲ.

ರಾಜ್ಯಕ್ಕೆ ಬರಗಾಲ ಬಂದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯದ ಪಾಲಿನ ಹಣ ಕೊಡಲಿಲ್ಲ. ನಾವು ಕಾನೂನು ಹೋರಾಟ ಶುರು ಮಾಡಿದೆವು. ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಬಳಿಕ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಸ್ವಲ್ಪ ಹಣ ಬಿಡುಗಡೆ ಮಾಡಿತು. ಹೀಗಾಗಿ ಕೇಂದ್ರದಲ್ಲಿ ರಾಜ್ಯದ ಪರವಾಗಿ ಹೋರಾಟ ಮುಂದುವರೆಸಲು ಎಲ್ಲಾ 28 ಮಂದಿ ಸಂಸದರಿಗೆ ಸೂಚನೆ ನೀಡಿದ್ದೇವೆ.



Siddaramaiah

ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟಿಸಿ ಮಾತನಾಡಿದೆ. ನನಗೂ ಅಂತರ್ಜಾತಿ ವಿವಾ...
23/05/2024

ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟಿಸಿ ಮಾತನಾಡಿದೆ.

ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ.

ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ. ಇದಕ್ಕಾಗಿ ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ.

ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ.

Siddaramaiah

ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಹೇಶ್ ಕಾಳೇಗೌಡ ಅವರನ್ನು ಭೇಟಿಯಾಗಿ ಆರೋಗ್...
23/05/2024

ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಹೇಶ್ ಕಾಳೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ.

Siddaramaiah

ಮೈಸೂರು ತಾಲ್ಲೂಕಿನ‌ ಜಯಪುರದ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಕಾಂತರಾಜು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ...
23/05/2024

ಮೈಸೂರು ತಾಲ್ಲೂಕಿನ‌ ಜಯಪುರದ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಕಾಂತರಾಜು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆ.

ರಾಜ್ಯ ಸರ್ಕಾರದ ವತಿಯಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಮೃತ ಕಾಂತರಾಜು ಅವರ ಸಹೋದರ ರವಿಗೆ ಉದ್ಯೋಗ ನೀಡಲಾಗುವುದು.

Siddaramaiah

ಮೈಸೂರು ಯರಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಇಡೀ ಕುಟುಂಬ ದುರಂತ ಸಾವಿಗೀಡಾಗಿತ್ತು. ನಿಜಕ್ಕೂ ಈ ಘಟನೆ ದುಃಖಕರವಾದುದ್ದು. ಇಂದು ಮೃತರ ಸಂಬಂ...
23/05/2024

ಮೈಸೂರು ಯರಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಇಡೀ ಕುಟುಂಬ ದುರಂತ ಸಾವಿಗೀಡಾಗಿತ್ತು. ನಿಜಕ್ಕೂ ಈ ಘಟನೆ ದುಃಖಕರವಾದುದ್ದು. ಇಂದು ಮೃತರ ಸಂಬಂಧಿಗಳನ್ನು ಭೇಟಿಮಾಡಿ ಸಾಂತ್ವನ ಹೇಳಿದೆ.

ಮೃತರಿಗೆ ತಲಾ 3 ಲಕ್ಷ ರೂ.ನಂತೆ ನತದೃಷ್ಟ ಕುಟುಂಬಕ್ಕೆ 12 ಲಕ್ಷ ರೂ. ಪರಿಹಾರ ನೀಡಲಾಗುವುದು.

Siddaramaiah

ವಿದ್ಯಾರ್ಥಿ ನಾಯಕರಾಗಿ ಸಾರ್ವಜನಿಕ ಜೀವನ ಪ್ರವೇಶಿಸಿ, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಶಾಸಕರಾಗಿ, ರಾಜ್ಯದ ಜನಪ...
15/05/2024

ವಿದ್ಯಾರ್ಥಿ ನಾಯಕರಾಗಿ ಸಾರ್ವಜನಿಕ ಜೀವನ ಪ್ರವೇಶಿಸಿ, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಶಾಸಕರಾಗಿ, ರಾಜ್ಯದ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ,

ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಇಂಧನ, ಬಂಧಿಖಾನೆ, ಸಹಕಾರ, ನಗರಾಭಿವೃದ್ಧಿ, ಜಲ ಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ,

ಎಐಸಿಸಿಯ ಸದಸ್ಯರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ,

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಗೌರವಾನ್ವಿತ ಅಧ್ಯಕ್ಷರಾಗಿ, ಸಂಘಟಿತ, ಅವಿರತ ಪರಿಶ್ರಮದಿಂದ 136 ಸ್ಥಾನಗಳನ್ನು ಗಳಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ,

ಉಪ ಮುಖ್ಯಮಂತ್ರಿಗಳಾಗಿಯೂ ಸೇವೆ ಸಲ್ಲಿಸುತ್ತಿರುವ ಶ್ರೀ ಡಿ.ಕೆ ಶಿವಕುಮಾರ್ ಅವರಿಗೆ ಜನ್ಮ ದಿನದ ಶುಭಾಶಯಗಳು.

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ತನ್ವೀರ್ ಸೇಠ್, ವಿನಯ್ ಕುಲಕರ್ಣಿ,ಜಿ.ಸಿ ಚಂದ್ರಶೇಖರ್, ಮಂಜುನಾಥ ಭಂಡಾರಿ ಹಾಗೂ ವಸಂತ್ ಕುಮಾರ್ ಅ...
24/03/2024

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ತನ್ವೀರ್ ಸೇಠ್, ವಿನಯ್ ಕುಲಕರ್ಣಿ,ಜಿ.ಸಿ ಚಂದ್ರಶೇಖರ್, ಮಂಜುನಾಥ ಭಂಡಾರಿ ಹಾಗೂ ವಸಂತ್ ಕುಮಾರ್ ಅವರಿಗೆ ಅಭಿನಂದನೆಗಳು.

ಲೋಕಸಭಾ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದೆ.ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು,...
22/03/2024

ಲೋಕಸಭಾ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದೆ.

ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು, ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಹಾಗೂ ಸಾಧನೆಗಳನ್ನು ಜನತೆಗೆ ಯಶಸ್ವಿಯಾಗಿ ತಲುಪಿಸಿ ಜಯಶಾಲಿಗಳಾಗಲಿ ಎಂದು ಶುಭ ಹಾರೈಸುತ್ತೇವೆ.

Address

ಪಿರಿಯಾಪಟ್ಟಣ
Piriyapatna

Telephone

+17406428958

Website

Alerts

Be the first to know and let us send you an email when ಪಿರಿಯಾಪಟ್ಟಣ ಕಾಂಗ್ರೆಸ್ posts news and promotions. Your email address will not be used for any other purpose, and you can unsubscribe at any time.

Share