02/11/2022
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾ.ಪಂ. ವತಿಯಿಂದ ಆಲಂಕಾರು ಗ್ರಾ.ಪಂ.ಸಭಾಂಗಣದಲ್ಲಿ ದಿನಾಂಕ:- 02/11/2022ರಂದು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ಕಡಬ ತಾಲೂಕು ಪಂಚಾಯತ್ ಆಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ *ಜಲ ಸಂಜೀವಿನಿ* ಕಾರ್ಯಕ್ರಮದಡಿ ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಕಾಮಗಾರಿಗಳ ವೈಜ್ಞಾನಿಕ ಯೋಜನಾ ವರದಿ ತಯಾರಿ ಮತ್ತು ಅನುಷ್ಟಾನದ ಕುರಿತು ಎರಡು ದಿನಗಳ ಮುಖಾ ಮುಖಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.
ಮೊದಲನೇ ತಂಡದ ತರಬೇತಿ ಕಾರ್ಯಾಗಾರವನ್ನು ಕಡಬ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಅವರು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭ ಸಹಾಯಕ ನಿರ್ದೇಶಕರು (ಗ್ರಾ.ಉ.) ಚೆನ್ನಪ್ಪ ಗೌಡ, ದ.ಕ.ಜಿ.ಪಂ.ನ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯಾಧಿಕಾರಿ ಕಿಶನ್ ರಾವ್, ಅಬ್ದುಲ್ ನಜೀರ್ ಸಾಬ್ ಸಂಸ್ಥೆಯ ವಿಕೇಂದ್ರೀಕೃತ ತರಬೇತಿ ಸಂಯೋಜಕರಾದ ಉಮಾನಾಥ ಶೆಟ್ಟಿ, ಆಲಂಕಾರು ಗ್ರಾ.ಪಂ. ಅಧ್ಯಕ್ಷರಾದ ಸದಾನಂದ ಆಚಾರ್ಯ, ತರಬೇತಿದಾರರಾದ ನರೇಗಾ ತಾಂತ್ರಿಕ ಸಂಯೋಜಕರಾದ ಸವಿತಾ ಲೋಬೊ, ತಾಂತ್ರಿಕ ಸಹಾಯಕ ಅಭಿಯಂತರರಾದ ಪ್ರಜ್ವಲ್ ಕುಮಾರ್ ವೇದಿಕೆಯಲ್ಲಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಪಂಚಾಯತ್ ಡಾಟಾ ಎಂಟ್ರಿ ಅಪರೇಟರ್ ಗಳು, ಗ್ರಾಮ ಕಾಯಕ ಮಿತ್ರರು, ತಾಲೂಕು ಸಾಮಾಜಿಕ ಪರಿಶೋಧಕ ಸಂಯೋಜಕರು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕ ಅಭಿಯಂತರರು, ತೋಟಗಾರಿಕಾ ತಾಂತ್ರಿಕ ಸಹಾಯಕರು, ಆಡಳಿತ ಸಹಾಯಕರು, ತಾಲೂಕು ಎಂಐಎಸ್, ಐಇಸಿ ಸಂಯೋಜಕರು ಉಪಸ್ಥಿತರಿದ್ದರು.