25/09/2022
ಸ್ವಚ್ಚತೆಯೆಂಬುದು ಕೆಲಸವಾಗಬಾರದು ಅಭ್ಯಾಸವಾಗಬೇಕು 🤗
ಇಂದು ನಮ್ಮ ಅರಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವಂತಹ ಮಲ್ಲೇನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣ ವನ್ನು ರಿದ್ಧಿ ಸಿದ್ಧಿ ವಿನಾಯಕ ಗೆಳೆಯರ ಬಳಗದ ವತಿಯಿಂದ ಹಾಗೂ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಮಲ್ಲೇನಹಳ್ಳಿಯ ಗ್ರಾಮ ಪಂಚಾಯಿತಿ ಸದಸ್ಯರಾದ ದೇವರಾಜ್ ಹಾಗೂ ನಂಜಪ್ಪ ಮತ್ತು ವಾಟರ್ ಮ್ಯಾನ್ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಶಾಲೆಯ ಸುತ್ತಮುತ್ತಲಿನ ಸ್ವಚ್ಚತಾ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲಾಯಿತು
ಇದಕ್ಕೆ ಸಹಕಾರವನ್ನು ನೀಡಿದಂತಹ ನಮ್ಮ ಸಂಘದ ಎಲ್ಲಾ ಸದಸ್ಯರಿಗೂ ಹೃತ್ಪೂರ್ವಕವಾದ ಧನ್ಯವಾದಗಳು 🙏