BJP UDUPI.

BJP UDUPI. Official page of BJP Udupi

ಒಂದು ಕ್ಷಣ ಕಣ್ಣು ಮುಚ್ಚಿ ಯೋಚಿಸಿ...ಭಾರತದಲ್ಲಿ ಹೆದ್ದಾರಿಗಳಲ್ಲಿ ಪ್ರಯಾಣಿಸುವುದು ಎಂದರೆ ಒಮ್ಮೆ ಗಂಟೆಗಟ್ಟಲೆ ಟ್ರಾಫಿಕ್, ಕಿರಿದಾದ ರಸ್ತೆಗಳು...
07/06/2026

ಒಂದು ಕ್ಷಣ ಕಣ್ಣು ಮುಚ್ಚಿ ಯೋಚಿಸಿ...

ಭಾರತದಲ್ಲಿ ಹೆದ್ದಾರಿಗಳಲ್ಲಿ ಪ್ರಯಾಣಿಸುವುದು ಎಂದರೆ ಒಮ್ಮೆ ಗಂಟೆಗಟ್ಟಲೆ ಟ್ರಾಫಿಕ್, ಕಿರಿದಾದ ರಸ್ತೆಗಳು ಮತ್ತು ಅನಿಶ್ಚಿತತೆಯ ಸಂಕೇತವಾಗಿತ್ತು. ವಿಮಾನ ಪ್ರಯಾಣವು ಸಾಮಾನ್ಯ ನಾಗರಿಕನ ಕನಸಿನ ವಿಷಯವಾಗಿತ್ತು. ಮೆಟ್ರೋ ರೈಲುಗಳು ಕೆಲವೇ ನಗರಗಳ ಸೀಮಿತ ಸೌಲಭ್ಯವಾಗಿದ್ದವು.

ಆದರೆ ಇಂದು ಚಿತ್ರಣ ಬದಲಾಗಿದೆ.

ಒಂದು ದೇಶದ ಅಭಿವೃದ್ಧಿಯನ್ನು ಅಳೆಯಬೇಕಾದರೆ ಅದರ ರಸ್ತೆಗಳನ್ನು ನೋಡಿ, ಸಂಪರ್ಕ ವ್ಯವಸ್ಥೆಯನ್ನು ನೋಡಿ, ಜನರ ಸಂಚಾರದ ವೇಗವನ್ನು ನೋಡಿ ಎಂದು ಹೇಳುತ್ತಾರೆ. ಕಳೆದ ಕೆಲವು ವರ್ಷಗಳಲ್ಲಿ ಭಾರತ ಇದೇ ದಿಕ್ಕಿನಲ್ಲಿ ಗಮನಾರ್ಹ ಬದಲಾವಣೆಯನ್ನು ಕಂಡಿದೆ.

ಒಮ್ಮೆ ದಿನಕ್ಕೆ ಸರಾಸರಿ 11 ಕಿ.ಮೀ. ಹೆದ್ದಾರಿ ನಿರ್ಮಾಣ ನಡೆಯುತ್ತಿದ್ದರೆ, ಇಂದು ಅದು 30 ರಿಂದ 35 ಕಿ.ಮೀ.ಗಳವರೆಗೆ ತಲುಪಿದೆ. ಇದು ಕೇವಲ ರಸ್ತೆ ನಿರ್ಮಾಣವಲ್ಲ; ಗ್ರಾಮಗಳನ್ನು ನಗರಗಳಿಗೆ, ರೈತರನ್ನು ಮಾರುಕಟ್ಟೆಗಳಿಗೆ, ಉದ್ಯಮಗಳನ್ನು ಅವಕಾಶಗಳಿಗೆ ಸಂಪರ್ಕಿಸುವ ಅಭಿವೃದ್ಧಿಯ ಹಾದಿಯಾಗಿದೆ.

ಒಮ್ಮೆ ದೇಶದಲ್ಲಿ 74 ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿದ್ದರೆ, ಇಂದು ಆ ಸಂಖ್ಯೆ 164ಕ್ಕೆ ಏರಿದೆ. ಇದರರ್ಥ ವಿಮಾನಯಾನವು ಕೆಲವರ ಸೌಲಭ್ಯದಿಂದ ಸಾಮಾನ್ಯ ಭಾರತೀಯರ ಅವಕಾಶವಾಗಿ ರೂಪಾಂತರಗೊಂಡಿದೆ.

ಮೆಟ್ರೋ ರೈಲುಗಳ ವಿಚಾರದಲ್ಲಿಯೂ ಭಾರತ ಹೊಸ ಅಧ್ಯಾಯ ಬರೆದಿದೆ. 248 ಕಿ.ಮೀ. ಮೆಟ್ರೋ ಜಾಲದಿಂದ 1095 ಕಿ.ಮೀ.ಗಳಿಗೂ ಅಧಿಕ ವಿಸ್ತರಣೆ ಕೇವಲ ಅಂಕಿ-ಅಂಶವಲ್ಲ; ಅದು ಕೋಟ್ಯಾಂತರ ಜನರ ದೈನಂದಿನ ಜೀವನವನ್ನು ಸುಲಭಗೊಳಿಸಿದ ಪರಿವರ್ತನೆಯ ಕಥೆಯಾಗಿದೆ.

ಅಭಿವೃದ್ಧಿ ಎಂದರೆ ಕೇವಲ ಕಟ್ಟಡಗಳ ನಿರ್ಮಾಣವಲ್ಲ. ಅಭಿವೃದ್ಧಿ ಎಂದರೆ ಸಮಯದ ಉಳಿತಾಯ. ಅಭಿವೃದ್ಧಿ ಎಂದರೆ ಅವಕಾಶಗಳ ಸೃಷ್ಟಿ. ಅಭಿವೃದ್ಧಿ ಎಂದರೆ ದೇಶದ ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲಿ ಬದಲಾವಣೆ ತರುವುದು.

ಇಂದು ಭಾರತ ವೇಗವಾಗಿ ಸಾಗುತ್ತಿದೆ. ಹೆದ್ದಾರಿಗಳು ದೇಶದ ನರನಾಡಿಗಳಂತೆ ವಿಸ್ತರಿಸುತ್ತಿವೆ. ವಿಮಾನ ನಿಲ್ದಾಣಗಳು ಹೊಸ ಕನಸುಗಳಿಗೆ ರೆಕ್ಕೆ ನೀಡುತ್ತಿವೆ. ಮೆಟ್ರೋ ರೈಲುಗಳು ಆಧುನಿಕ ಭಾರತದ ಚಲನಶಕ್ತಿಯಾಗಿವೆ.

ಅಂಕಿ-ಅಂಶಗಳು ಕೇವಲ ಸಂಖ್ಯೆಗಳಲ್ಲ; ಅವು ಒಂದು ದೇಶದ ಪಯಣದ ಸಾಕ್ಷಿಗಳು.

ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಎಂಬ ಸಂಕಲ್ಪದೊಂದಿಗೆ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿರುವ ಭಾರತಕ್ಕೆ ಹೆಮ್ಮೆಯ ನಮನಗಳು.

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ಬ್ರಹ್ಮಾವರದಲ್ಲಿ ಜನಸೇವಾ ಟ್ರಸ್ಟ್ (ರಿ.), ಗಿಳಿಯಾರು ಹಾಗೂ ಟೀಮ್ ಅಭಿಮತ ವತಿಯಿಂದ ಆಯೋಜಿ...
07/06/2026

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ಬ್ರಹ್ಮಾವರದಲ್ಲಿ ಜನಸೇವಾ ಟ್ರಸ್ಟ್ (ರಿ.), ಗಿಳಿಯಾರು ಹಾಗೂ ಟೀಮ್ ಅಭಿಮತ ವತಿಯಿಂದ ಆಯೋಜಿಸಲಾದ ಜಾಗೃತಿ ನಡಿಗೆ "ವಾಕಥಾನ್" ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಯುವ ಜನತೆಯಲ್ಲಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ, ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣದ ಸಂದೇಶ ಸಾರಿದ ಈ ಸಮಾಜಮುಖಿ ಕಾರ್ಯಕ್ರಮದಲ್ಲಿ ಟೀಮ್ ಅಭಿಮತದ ವಸಂತ ಗಿಳಿಯಾರು, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ, ಉಡುಪಿ ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ವಿವಿಧ ಗಣ್ಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

"ಡ್ರಗ್ಸ್ ಮುಕ್ತ ಯುವಜನತೆ – ಸದೃಢ ಸಮಾಜದ ಭದ್ರ ಅಡಿಪಾಯ" ಎಂಬ ಸಂದೇಶದೊಂದಿಗೆ ನಡೆದ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಜನಸೇವಾ ಟ್ರಸ್ಟ್, ಟೀಮ್ ಅಭಿಮತ ಹಾಗೂ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು.

ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಂಬಳ್ಳಿಯಲ್ಲಿ ಸುಮಾರು 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಆಯುಷ್ಮಾನ್ ಆರೋಗ್ಯ  ಕೇಂದ್ರದ ಉದ್ಘಾಟನ...
06/06/2026

ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಂಬಳ್ಳಿಯಲ್ಲಿ ಸುಮಾರು 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣ ನೆರವೇರಿಸಿದರು.

ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಜನತೆಯ ಆರೋಗ್ಯ ಸೇವೆಗೆ ವಿಶೇಷ ಆದ್ಯತೆ ನೀಡುತ್ತಿದ್ದು, ನಿಡಂಬಳ್ಳಿಯಲ್ಲಿ ಉದ್ಘಾಟನೆಗೊಂಡ ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಸ್ಥಳೀಯ ಜನತೆಗೆ ಉತ್ತಮ ಸೇವೆಯ ಜೊತೆಗೆ ಉತ್ತಮ ಆರೋಗ್ಯವಂತ ಸಮಾಜದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಲಿ ಎಂದರು.

ಸಮಾರಂಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ವಾಸುದೇವ, ವೈದ್ಯರಾದ ಡಾ. ಅಕ್ಷತಾ, ಇಲಾಖೆಯ ಇಂಜಿನಿಯರ್ ಗುರು ಪ್ರಸಾದ್, ಕಲ್ಯಾಣಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗರಾಜ್ ಕುಂದರ್, ಸತೀಶ್ ನಾಯ್ಕ್, ಕೃಷ್ಣ ದೇವಾಡಿಗ, ಬಡಾನಿಡಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಉಮೇಶ್ ಪೂಜಾರಿ, ಪ್ರಭಾಕರ ತಿಂಗಳಾಯ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರೇಮಲತಾ, ನವೀನ್ ಕಾಂಚನ್, ಜಾನ್ಸನ್ , ಪ್ರಶಾಂತ್ ಆಚಾರ್ಯ, ಅನಿತಾ ನಾಯ್ಕ್ , ಪ್ರಮುಖರಾದ ಸುಧೀರ್ ಕಲ್ಯಾಣಪುರ, ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಕುತ್ಯಾರ್ ನವೀನ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಬೈಂದೂರು ಮಂಡಲ ಬಿಜೆಪಿ ಸಂಘಟನಾತ್ಮಕ ಸಭೆಯು ಯಶಸ್ವಿಯಾಗಿ ನಡೆಯ...
06/06/2026

ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಕುತ್ಯಾರ್ ನವೀನ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಬೈಂದೂರು ಮಂಡಲ ಬಿಜೆಪಿ ಸಂಘಟನಾತ್ಮಕ ಸಭೆಯು ಯಶಸ್ವಿಯಾಗಿ ನಡೆಯಿತು.

ಸಭೆಯಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರ ಸಕ್ರಿಯ ಭಾಗವಹಿಸುವಿಕೆ ಹಾಗೂ ಮುಂಬರುವ ಕಾರ್ಯಕ್ರಮಗಳ ಕುರಿತು ಸಮಾಲೋಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೈಂದೂರು ಮಂಡಲ ಅಧ್ಯಕ್ಷರಾದ ಶ್ರೀಮತಿ ಅನಿತಾ ಆರ್.ಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಹಾಗೂ ಬೈಂದೂರು ಮಂಡಲ ಉಸ್ತುವಾರಿಗಳಾದ ದಿನಕರ್ ಶೆಟ್ಟಿ ಹೆರ್ಗ,ಜಿಲ್ಲಾ ಉಪಾಧ್ಯಕ್ಷರು ಹಾಗೂ ಮಂಡಲ ಪ್ರಭಾರಿಗಳಾದ ಸುರೇಶ್ ಶೆಟ್ಟಿ ಕಾಡುರು, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ದಿನಸಂವತ್ಸರ 1674ರ ಜೂನ್ 6ರಂದು ರಾಯಗಡದಲ್ಲಿ ಪಟ್ಟಾಭಿಷೇಕಗೊಂಡು ಹಿಂದವಿ ಸ್ವರಾಜ್ಯಕ್ಕೆ ಅಧಿಕೃತ ರೂಪ ...
06/06/2026

ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ದಿನ

ಸಂವತ್ಸರ 1674ರ ಜೂನ್ 6ರಂದು ರಾಯಗಡದಲ್ಲಿ ಪಟ್ಟಾಭಿಷೇಕಗೊಂಡು ಹಿಂದವಿ ಸ್ವರಾಜ್ಯಕ್ಕೆ ಅಧಿಕೃತ ರೂಪ ನೀಡಿದ ಇತಿಹಾಸದ ಸುವರ್ಣ ದಿನ.

ಶೌರ್ಯ, ಸ್ವಾಭಿಮಾನ, ಸುಶಾಸನ ಹಾಗೂ ಜನಕಲ್ಯಾಣದ ಆದರ್ಶ ಪ್ರತೀಕ, ಹಿಂದವಿ ಸ್ವರಾಜ್ಯದ ಸ್ಥಾಪಕರಾದ ಛತ್ರಪತಿ ಶಿವಾಜಿ ಮಹಾರಾಜರಿಗೆ ವಿನಮ್ರ ನಮನಗಳು.

ಜೈ ಶಿವಾಜಿ! ಜೈ ಭವಾನಿ!

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಾಗೂ "ಏಕ್ ಪೇಡ್ ಮಾ ಕೆ ನಾಮ್" ಅಭಿಯಾನದಡಿ ಬ್ರಹ್ಮಾವರದ ನೀಲಾವರ ಗೋಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮವು ಬ...
05/06/2026

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಾಗೂ "ಏಕ್ ಪೇಡ್ ಮಾ ಕೆ ನಾಮ್" ಅಭಿಯಾನದಡಿ ಬ್ರಹ್ಮಾವರದ ನೀಲಾವರ ಗೋಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡುವ ಸಂಕಲ್ಪದೊಂದಿಗೆ ಔಷಧೀಯ ಹಾಗೂ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಉಡುಪಿ ಗ್ರಾಮಾಂತರ ಮಂಡಲಾಧ್ಯಕ್ಷ ರಾಜೀವ್ ಕುಲಾಲ್, ಅಭಿಯಾನದ ಜಿಲ್ಲಾ ಸಂಚಾಲಕ ಮಹಾವೀರ ಹೆಗ್ಡೆ, ಸಹ ಸಂಚಾಲಕರಾದ ಶಿವಕುಮಾರ್ ಅಂಬಲಪಾಡಿ, ಕಮಲಾಕ್ಷ ಹೆಬ್ಬಾರ್, ಅನಿತಾ ಶ್ರೀಧರ್, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಮೋಹನ್ ಚಂದ್ರ, ಪ್ರಧಾನ ಕಾರ್ಯದರ್ಶಿಗಳಾದ ಶ್ಯಾಮ್ ಪ್ರಸಾದ್ ಭಟ್, ಪುಷ್ಪರಾಜ್ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ನೀಲಾವರ ಗೋಶಾಲೆಯ ಆಡಳಿತ ಮಂಡಳಿ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು.

ಇಂದು ಒಂದು ಗಿಡ...ನಾಳೆ ಸಾವಿರ ಉಸಿರು...ಇಂದು ಒಂದು ಸಂಕಲ್ಪ...ನಾಳೆ ಹಸಿರು ಭವಿಷ್ಯ...ವಿಶ್ವ ಪರಿಸರ ದಿನದ ಶುಭಾಶಯಗಳು
05/06/2026

ಇಂದು ಒಂದು ಗಿಡ...

ನಾಳೆ ಸಾವಿರ ಉಸಿರು...

ಇಂದು ಒಂದು ಸಂಕಲ್ಪ...

ನಾಳೆ ಹಸಿರು ಭವಿಷ್ಯ...

ವಿಶ್ವ ಪರಿಸರ ದಿನದ ಶುಭಾಶಯಗಳು

ಬೈಂದೂರಿನ ಸಮಗ್ರ ಅಭಿವೃದ್ಧಿ ಹಾಗೂ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುವ ಮಹತ್ವಾಕಾಂಕ್ಷೆಯ ಉದ್ದೇಶದೊಂದಿಗೆ ಆಯೋಜಿಸಲಾದ ‘ಇನ್ವೆಸ್ಟ್ ಬೈಂದೂರು’ ...
04/06/2026

ಬೈಂದೂರಿನ ಸಮಗ್ರ ಅಭಿವೃದ್ಧಿ ಹಾಗೂ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುವ ಮಹತ್ವಾಕಾಂಕ್ಷೆಯ ಉದ್ದೇಶದೊಂದಿಗೆ ಆಯೋಜಿಸಲಾದ ‘ಇನ್ವೆಸ್ಟ್ ಬೈಂದೂರು’ ಮೊದಲ ಸಮಾಲೋಚನಾ ಸಭೆ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯಿತು.

ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ಅವರು ಸಭೆಯಲ್ಲಿ ಭಾಗವಹಿಸಿ, ಬೈಂದೂರಿನಲ್ಲಿ ಹೊಸ ಹೂಡಿಕೆ ಅವಕಾಶಗಳ ಕುರಿತು ಸಮಾಲೋಚನೆ ನಡೆಸಿದರು.

ಅಭಿವೃದ್ಧಿ ಮತ್ತು ಪ್ರಗತಿಯತ್ತ ಬೈಂದೂರು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.

ಭಾರತೀಯ ಜನತಾ ಪಾರ್ಟಿ - ಉಡುಪಿ ಜಿಲ್ಲೆ, ಇದರ ವಿವಿಧ ಪ್ರಕೋಷ್ಟಗಳ ಜವಾಬ್ದಾರಿಯನ್ನ ವಹಿಸಿಕೊಂಡ ಎಲ್ಲಾ ಪ್ರಕೋಷ್ಟಗಳ ಸಂಚಾಲಕ ಹಾಗು ಸಹ ಸಂಚಾಲಕರಿ...
04/06/2026

ಭಾರತೀಯ ಜನತಾ ಪಾರ್ಟಿ - ಉಡುಪಿ ಜಿಲ್ಲೆ, ಇದರ ವಿವಿಧ ಪ್ರಕೋಷ್ಟಗಳ ಜವಾಬ್ದಾರಿಯನ್ನ ವಹಿಸಿಕೊಂಡ ಎಲ್ಲಾ ಪ್ರಕೋಷ್ಟಗಳ ಸಂಚಾಲಕ ಹಾಗು ಸಹ ಸಂಚಾಲಕರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆಗಳು ...

Address


Website

Alerts

Be the first to know and let us send you an email when BJP UDUPI. posts news and promotions. Your email address will not be used for any other purpose, and you can unsubscribe at any time.

  • Want your organization to be the top-listed Government Service?

Share